ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.

ನಡೆದಿದ್ದೇನು??

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು ಇದ್ದರು.
ವೇದಿಕೆಯಲ್ಲಿ ಇಡಿ ಕಾರ್ಯಕ್ರಮದ ರೂವಾರಿ ಕಿಮ್ಮನೆ ರತ್ನಾಕರ್ ಅವರಿಗೆ ಭಾಷಣಕ್ಕೆ ಅವಕಾಶ ನೀಡದೆ ಎಲ್ಲಾ ನಾಯಕರ ಭಾಷಣ ಮುಗಿದ ಮೇಲೆ ಜನ ಎದ್ದು ಹೋದ ಮೇಲೆ ಅವಕಾಶ ನೀಡಲಾಗಿತ್ತು. ಇದರಿಂದ ಸಿಟ್ಟಾದ ಕಿಮ್ಮನೆ ಸುಮ್ಮನೆ ವಂದನೆ ಹೇಳಿ ಕೆಳಗಿಳಿದರು. ಇದರಿಂದ ಕಿಮ್ಮನೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ಲೆಕ್ಸ್ ಲಿ ಕಿಮ್ಮನೆ ಪೋಟೋ ನಾಪತ್ತೆ:::

ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಹಾಕಿರುವ ಬ್ಯಾನರ್ ಅಲ್ಲಿ ಕೂಡ ಕಿಮ್ಮನೆ ಫೋಟೋ ಇರಲಿಲ್ಲ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್ ಗುಂಪುಗಾರಿಕೆಗೆ ಕಿಮ್ಮನೆ ರತ್ನಾಕರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ನೇತೃತ್ವದ ಕಾಂಗ್ರೆಸ್ ಸಭೆಯಲ್ಲಿ ಕಿಮ್ಮನೆ ರತ್ನಾಕರ್ ಗೆ ಅಪಮಾನ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಭಿಮಾನಿಗಳ ಆಕ್ರೋಶ ಹೊರ ಹಾಕಿದರು.

ಮೇ 6ರಿಂದ ಇಂದಿನವರೆಗೆ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದಿಂದ 65 ಕಿಮೀ ಪಾದಯಾತ್ರೆ ನಡೆಸಿದ್ದ ಕಿಮ್ಮನೆ ರತ್ನಾಕರ್ ಅವರನ್ನು ಅವಮಾನ ಮಾಡಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಕಿಮ್ಮನೆ ಅಭಿಮಾನಿಗಳ ಆಕ್ರೋಶ:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣ ಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದ ಕಿಮ್ಮನೆ ರತ್ನಾಕರ್ ಅವರ ಫೋಟೋ ಇಲ್ಲ.
ಸಭೆಯಲ್ಲಿ ಕಿಮ್ಮನೆ ರತ್ನಾಕರ್  ಭಾಷಣ ಮಾಡಲು ಅವಕಾಶ ನೀಡಿಲ್ಲ. ಪಕ್ಷದ ಕಚೇರಿಯ ಬಳಿ ಕಿಮ್ಮನೆ ರತ್ನಾಕರ್ ಭಾವಚಿತ್ರವಿರುವ ಬ್ಯಾನರ್ ಕೂಡ ಹಾಕಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯ ಎದುರು ಕಿಮ್ಮನೆ ರತ್ನಾಕರ್ ಬೆಂಬಲಿಗರ ಪ್ರತಿಭಟನೆ ನಡೆಸಿದರು. ಈ ವೇಳೆ ಕಿಮ್ಮನೆ ಪರ ಘೋಷಣೆ ಕೂಗಿದ ಅಭಿಮಾನಿಗಳು ಹಾಗೂ ಎರಡು ಗುಂಪು ಗಳ ನಡುವೆ ಪರಸ್ಪರ ವಾಗ್ದಾಳಿ ನಡೆಯಿತು. ಎರಡು ಗುಂಪಿನ ಕಾಂಗ್ರೆಸ್ ಕಾರ್ಯಕರ್ತರನ್ನು ಪೋಲಿಸರು ಕಾಂಗ್ರೆಸ್ ಪಕ್ಷದ ಕಚೇರಿಯ ಬಳಿಯಿಂದ ಹೊರ ಕಳುಹಿಸಿದ್ದು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪೋಲಿಸರ ಮದ್ಯ ಪ್ರವೇಶದಿಂದ ತಿಳಿಯಾದ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ತೀರ್ಥಹಳ್ಳಿಯಲ್ಲಿ ಕಿಮ್ಮನೆ ಬಣದ ಇಬ್ಬರು ನಾಯಕರ ನಡುವೆ ನಡು ರಾತ್ರಿ ಗಲಾಟೆ, ಹೊಡೆದಾಟ ನಡೆದಿದ್ದು ಸುದ್ದಿಯಲ್ಲಿರುವ ನಡುವೆ ಇದೀಗ ಮತ್ತೊಂದು ಭಿನ್ನಮತ ಸ್ಫೋಟಗೊಂಡಿದೆ. ಆದರೆ ಈ ಎಲ್ಲಾ ಘಟನೆ ಹಿಂದೆ ಯಾರ ಕೈ ಇರಬಹುದು ಎಂಬ ಚರ್ಚೆ ತೀರ್ಥಹಳ್ಳಿಯಲ್ಲಿ ಶುರುವಾಗಿದೆ.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

12 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

12 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

12 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

19 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

23 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

23 hours ago