ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು.

ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ.

ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ರಾಜ್ಯ ಸರ್ಕಾರದಲ್ಲಿ ಭ್ರಷ್ಠಾಚಾರ ತಾಂಡವಾಡುತ್ತಿದೆ.  ಸರ್ಕಾರವನ್ನೇ ವಜಾಗೊಳಿಸಬೇಕು ಎಂಬುದು ನನ್ನ ಆಗ್ರಹವೆಂದರು.

ರಾಜ್ಯ ಸರ್ಕಾರದ ಇಬ್ಬರು ಸಚಿವರಾದ ಆರಗ ಮತ್ತು ಆಶ್ವಥ್ ನಾರಾಯಣರನ್ನ ಸರ್ಕಾರದಿಂದ ಕೈಬಿಡಬೇಕು. ಮೊದಲು ಬಿಜೆಪಿ ಈ ಘಟನೆ ಬಗ್ಗೆ ಯಾವುದೇ ಅಕ್ರಮ ನಡೆದಿಲ್ಲ ಎನ್ನಲಾಗುತ್ತಿತ್ತು. ಈಗ ದಾಖಲೆ ಕೊಡಿ ಎನ್ನುತ್ತಿದ್ದಾರೆ. ದಾಖಲೆ ನೀಡದೆ ಹಾಗಾದರೆ ಪೊಲೀಸ್ ಅಧಿಕಾರಿಗಳು ಸಿಬ್ವಂದಿಗಳು ವಜಾಗೊಂಡರಾ? ಜೈಲಿಗೆ ಹೋದರಾ ಎಂದು ಪ್ರಶ್ನಿಸಿದರು.


ಸ್ವಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ :


ಬಿಜೆಪಿ ಪಕ್ಷದ ದುರಾಡಳಿತ, 40 % ಕಮಿಷನ್ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಕುರಿತು ಇಂದಿನಿಂದ 4 ದಿನಗಳ ಪರ್ಯಂತ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನೆಡೆಯುತ್ತಿರುವ ಪಾದಯಾತ್ರೆಯ ಸಂದರ್ಭದಲ್ಲಿ ತಮ್ಮ ಸಜ್ಜನಿಕೆ ಎಂಬುವುದಕ್ಕೆ ಗುಡ್ಡೆಕೊಪ್ಪದ ಗೃಹಸಚಿವರ ಮನೆಯ ಎದುರು ತಮ್ಮ ಕಾರ್ಯಕರ್ತರ ಮೇಲೆ ಗರಂ ಆಗಿದ್ದು ನಿದರ್ಶನವಾಗಿದೆ.

ಯಾವುದೇ ರಾಜಕೀಯ ಎದುರಾಳಿ ವಿರುದ್ಧ ಪ್ರತಿಭಟಿಸುವಾಗಲು ಅವರ ಮನೆ ಬಳಿ ಕುಟುಂಬದ ಸದಸ್ಯರ ಎದುರು ದಿಕ್ಕಾರ ಕೂಗಬಾರದೆಂಬ ಕಿಮ್ಮನೆ ನಿಲುವು ಮೆಚ್ಚುವಂತಹದ್ದು. ಕಿಮ್ಮನೆಯವರ ಈ ನಿಲುವನ್ನು ನೋಡಿ ಅನೇಕ ರಾಜಕಾರಣಿಗಳು ಕಿಮ್ಮನೆ ರತ್ನಾಕರ್ ಅವರನ್ನು ನೋಡಿ ಕಲಿಯಬೇಕಿದೆ.

ಗುಡ್ಡೆಕೊಪ್ಪದ ಸಚಿವರ ಮನೆ ಮುಂದೆ ಆಗಿದ್ದೇನು?

ತಾಲೂಕಿನ ಗುಡ್ಡೇಕೊಪ್ಪ ಗ್ರಾಮಪಂಚಾಯಿತಿಯಿಂದ ಹೊರಟ ಪಾದಯಾತ್ರೆ ಗೃಹಸಚಿವ ಆರಗ ಜ್ಞಾನೇಂದ್ರರವರ ಮನೆಯ ಮುಂದೆ ತಿರುವಿನ ಬಳಿ ಬರುತ್ತಿದ್ದಂತೆ ಕಾರ್ಯಕರ್ತರು ಡ್ರಮ್ ಬಾರಿಸಲು ಶುರುಮಾಡಿದರು. ಇದರಿಂದ ಕೋಪಗೊಂಡ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ನಾನು ಪಾದಯಾತ್ರೆ ಮಾಡುವುದಿಲ್ಲ ವಾಪಾಸಾಗುತ್ತೇನೆಂದು ಗರಂ ಆಗಿದ್ದಾರೆ.

ನಂತರ ಕಿಮ್ಮನೆ ರತ್ನಾಕರ್ ಮಾತಿಗೆ ಬೆಲೆಕೊಟ್ಟ ಕಾರ್ಯಕರ್ತರು ಡೊಳ್ಳು ಬಾರಿಸುವುದು ಬಂದ್ ಮಾಡಿ ಗೃಹಸಚಿವರ ಮನೆ ತಿರುವಿನಿಂದ 50 ಮೀಟರ್ ದೂರದ ನಂತರ ಡೊಳ್ಳು ಬಾರಿಸಿ ಪಾದಯಾತ್ರೆ ಮುಂದುವರೆಸಿದರು. ಒಟ್ಟಿನಲ್ಲಿ ಈ ಘಟನೆ ಕಿಮ್ಮನೆ ರತ್ನಾಕರ್ ಅವರ ಸಜ್ಜನಿಕೆಯ ರಾಜಕೀಯಕ್ಕೆ ನಿದರ್ಶನವಾಯಿತು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

1 hour ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

3 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

4 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago