ಚಿಕ್ಕಮಗಳೂರಿನಲ್ಲಿ ನಡೆದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್‌ಪೇಟೆ ಯುವಕನ ಅದ್ವಿತೀಯ ಸಾಧನೆ :

ಭಾನುವಾರ ಚಿಕ್ಕಮಂಗಳೂರಿನ ಅಬ್ಲೇಜ್ ಮೋಟಾರ್ಸ್ ಸ್ಪೋರ್ಟ್ಸ್ ಕ್ಲಬ್ ಹಮ್ಮಿಕೊಂಡಿದ್ದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್ ಪೇಟೆಯ ಯುವಕ ನಿತೀಶ್ ಎಂ ಗೌಡ ಅದ್ವಿತೀಯ ಪ್ರದರ್ಶನ ತೋರಿ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ.


ನಿತೀಶ್ ಎಂ ಗೌಡ ರಿಪ್ಪನ್ ಪೇಟೆಯ ಹೊಸನಗರ ರಸ್ತೆ ನಿವಾಸಿಗಳಾದ ಎಂ ಬಿ‌ ಮಂಜುನಾಥ್ ಮತ್ತು ಪ್ರವೀಣಿ ದಂಪತಿಗಳ ಪುತ್ರನಾಗಿದ್ದು ಕಾಫಿನಾಡಿನ ಜನ ಮೂಗಿನ ಮೇಲೆ ಬೆರಳಿಡುವಂತೆ ತನ್ನ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾನೆ.


ಇವರು ಬಾಲ್ಯದಿಂದಲೇ ದ್ವಿಚಕ್ರ ವಾಹನ ಗಳನ್ನುಓಡಿಸುವಲ್ಲಿ ಆಸಕ್ತಿ ಹೊಂದಿದ್ದರು. ನಂತರ ಕಾರ್ ರೇಸ್’ಗಳನ್ನು ವೀಕ್ಷಿಸುತ್ತಿದ್ದ ಅವರು ಈ ಕ್ಷೇತ್ರದಲ್ಲಿ ಏನಾದರು ಸಾಧಿಸುವ ಉದ್ದೇಶದಿಂದ ಕಾರ್’ಗಳನ್ನು ಚಲಾಯಿಸುತ್ತಾ ಆಸಕ್ತಿ ಹೊಂದಿದರು. ಯಾವುದೇ ತರಬೇತುದಾರರಿಲ್ಲದೆ ನಿರಂತರ ಶ್ರಮ ಹಾಗೂ ಅಭ್ಯಾಸದಿಂದ ಸ್ವತಃ ಕಾರ್ ರೇಸ್’ಗಳಲ್ಲಿ ಭಾಗವಹಿಸುವ ಪ್ರಾವಿಣ್ಯತೆ ಹೊಂದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕಾರ್ ರೇಸ್’ನಲ್ಲಿ ತೊಡಗಿಕೊಳ್ಳುವ ಮೂಲಕ ಇಂದು ಮಲೆನಾಡಿನಲ್ಲೇ ಮೊಟ್ಟ ಮೊದಲ ಕಾರ್ ರೇಸ್’ಗಳಲ್ಲಿ ಭಾಗವಹಿಸುತ್ತಿರುವ ಸ್ಪರ್ಧಿಯಾಗಿ ಹೊರಹೊಮ್ಮಿರುವ ಪ್ರತಿಭೆಯಾಗಿ ಮಿಂಚುತ್ತಿದ್ದಾರೆ.


ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಸಾಧಕರ ಜೊತೆ ಸೆಣಸಾಡಿ ಸಾಧನೆ ಮಾಡಿದ ಯುವಕನಿಗೆ ರಿಪ್ಪನ್ ಪೇಟೆಯ ಅನೇಕ ಸಂಘ – ಸಂಸ್ಥೆಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.


ರೋಮಾಂಚನಗೊಳಿಸಿದ ಮೋಟಾರ್ ರ‍್ಯಾಲಿ:

ಧೂಳೆಬ್ಬಿಸಿ ಸಾಗಿದ ವಾಹನಗಳು ಸೀಟಿ ಹೊಡೆದು, ಚಪ್ಪಾಳೆ ತಟ್ಟಿ, ಚಾಲಕರನ್ನು ಹುರಿದುಂಬಿಸಿದ ಸಾರ್ವಜನಿಕರು ನೋಡುಗರನ್ನು ರೋಮಾಂಚನಗೊಳಿಸಿತು ಮೋಟಾರ್ ರ‍್ಯಾಲಿ,, ಚಿಕ್ಕಮಗಳೂರು ನಗರದ ಮೌಂಟೆನ್ ವ್ಯೂ ಕಾಲೇಜ್ ಆವರಣದಲ್ಲಿ ಅಬ್ಲೇಜ್ ಮೋಟಾರ್ಸ್ ಸ್ಪೋರ್ಟ್ಸ್ ಕ್ಲಬ್ ಭಾನುವಾರ ಹಮ್ಮಿಕೊಂಡಿದ್ದ ಡರ್ಟಿ ಟ್ರಿಕ್ಸ್ ಆಟೋಕ್ರಾಸ್ ರ್ಯಾಲಿಯಲ್ಲಿ ಕಂಡುಬಂದ ದೃಶ್ಯಗಳು ವಿದ್ಯಾಸಂಸ್ಥೆಯ ಆವರಣದಲ್ಲಿ ಕಾರುಗಳ ದರ್ಬಾರ್ ನಡೆಯಿತು.

ಮುಂಬೈ, ಬೆಂಗಳೂರು, ತಮಿಳುನಾಡು, ಕೇರಳ ಹಾಗೂ ಕಾಫಿನಾಡು ಚಿಕ್ಕಮಗಳೂರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಆಟೋ ರ‍್ಯಾಲಿಯ ಚಾಲಕರು ಚಾಲನೆಯ ಚಾಕಚಕ್ಯತೆಯನ್ನು ಮೆರೆದರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.
ದೇಶದ ಅನೇಕ ಚಾಂಪಿಯನ್ ಗಳ ನಡುವೆ ಸೆಣಸಾಡಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದ ರಿಪ್ಪನ್‌ಪೇಟೆಯ ಯುವಕ ನಿತೀಶ್ ಎಂ ಗೌಡ ರವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂಬುವುದೇ ಪೋಸ್ಟ್ ಮ್ಯಾನ್ ನ್ಯೂಸ್ ತಂಡದ ಆಶಯ.


ರ‍್ಯಾಲಿಯ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

16 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

16 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

17 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

24 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

1 day ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

1 day ago