ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ ಕೆ ಶಿವಕುಮಾರ್ ಜನ್ಮದಿನ ಆಚರಣೆ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣು ಬ್ರೆಡ್ ನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವಿತರಿಸಿದರು.
ನಂತರ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿಕೆಶಿ ಅವರ ವಿರುದ್ಧ ಟೀಕೆ ಮಾಡುವಾಗ ಯಾರೇ ಆದರೂ ಎಚ್ಚರಿಕೆಯಿಂದ ಇರಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಾಗಿಲು ಇಲ್ಲ. ಕಾಂಗ್ರೆಸ್ನಲ್ಲಿರುವುದು ಒಂದೇ ಬಾಗಿಲು ಆಗಿದ್ದು, ೨೦೨೩ರ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಮತ್ತು ಆಯ್ಕೆಯಾಗಿ ಬಂದ ಶಾಸಕರು ತೀರ್ಮಾನಿಸುತ್ತಾರೆ. ಶಿವಕುಮಾರ್, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಡಾ. ಪರಮೇಶ್ವರ್ ಇನ್ನಿತರರ ಬಣ ಇದೆ ಎನ್ನುವುದು ಬಿಜೆಪಿ ಕಟ್ಟುಕಥೆಯಾಗಿದೆ. ಕಾಂಗ್ರೆಸ್ಗಿಂತ ಬಿಜೆಪಿಯಲ್ಲಿಯೇ ಹೆಚ್ಚು ಒಳಬಣಗಳಿವೆ ಎಂದು ಹೇಳಿದರು.
ಡಿಕೆಶಿ ಕಾಂಗ್ರೆಸ್ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ತರಬೇಕು ಎನ್ನುವ ಏಕೈಕ ಉದ್ದೇಶದಿಂದ ಹಗಲುರಾತ್ರಿ ಪಕ್ಷ ಸಂಘಟನೆಗೆ ಅವರು ಒತ್ತು ನೀಡುತ್ತಿದ್ದಾರೆ. ಅವರ ಸಂಘಟನಾಶಕ್ತಿ ಇನ್ನಷ್ಟು ಗಟ್ಟಿಗೊಳ್ಳಲಿ ಎನ್ನುವುದು ನಮ್ಮೆಲ್ಲರ ಹಾರೈಕೆ. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದಿಂದ ರೋಗಿಗಳಿಗೆ ಹಣ್ಣುಬ್ರೆಡ್ ವಿತರಣೆ ಮಾಡುವ ಮೂಲಕ ಅವರ ಭವಿಷ್ಯ ಉಜ್ವಲವಾಗಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
ನಗರಸಭೆ ವಿಪಕ್ಷ ನಾಯಕ ಮಂಡಗಳಲೆ ಗಣಪತಿ, ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಶ್ರೀಕಾಂತ್ ಕುರುವರಿ, ಉಪಾಧ್ಯಕ್ಷ ಸಂದೀಪ್ ಲ್ಯಾವಿಗೆರೆ, ಪ್ರಧಾನ ಕಾರ್ಯದರ್ಶಿ ಮೇಘರಾಜ್ ಗೌತಮಪುರ, ಕಾರ್ಯಾಧ್ಯಕ್ಷ ನಾಗೇಶ್ ನೇರಲಗಿ, ಖಜಾಂಚಿ ಮಹೇಶ್, ಪ್ರಮುಖರಾದ ರೇಖಾ ಕೃಷ್ಣಮೂರ್ತಿ, ನಯನ, ಚಿನ್ಮಯ್ ಸಾಗರ್ ಇನ್ನಿತರರು ಹಾಜರಿದ್ದರು
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…