ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ.
ಸಂತೋಷ್ ಕುಮಾರ್ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ.
ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈಗ ಕರ್ನಾಟಕ ಲೋಕಾಯುಕ್ತ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಇದರಂತೆ ರಾಜ್ಯದ 37 ಪೊಲೀಸ್ ಇನ್ ಸ್ಪೆಕ್ಟರ್ ಗಳು ವರ್ಗಾವಣೆಗೊಂಡಿದ್ದಾರೆ.