ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು.
ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ ಕೆಲಸವೊಂದು ದೆಹಲಿ ಮಟ್ಟದಲ್ಲಿ ಆಗಬೇಕಿದ್ದರಿಂದ ಅದಕ್ಕಾಗಿ ಸಮಯ ಕೇಳಿದ್ದ ಗೃಹಸಚಿವರಿಗೆ ದೆಹಲಿ ನಾಯಕರು ಭೇಟಿಗೆ ಅವಕಾಶ ನೀಡಿದ್ದರಿಂದ ದಿಢೀರ್ ದೆಹಲಿಗೆ ತೆರಳಬೇಕಾಯ್ತು ಎಂಬ ವಿಚಾರವೂ ಇತ್ತು.
ಇದರ ಬಗ್ಗೆ ಮಾತನಾಡಿರುವ ಗೃಹಸಚಿವರು, ನಾನು ದೆಹಲಿಗೆ ಹೋಗಿದ್ದು ಖಾಸಗಿ ಕೆಲಸಕ್ಕಾಗಿ, ಅಲ್ಲಿ ಸಿಎಂ ಬೊಮ್ಮಾಯಿ ರವರು ಇದ್ದರು ಅವರನ್ನ ಭೇಟಿಯಾಗಿದ್ದೇನೆ ಅಷ್ಟೆ. ಆದರೆ ಹೈಕಮಾಂಡ್ ನಾಯಕರನ್ನು, ಪ್ರಹ್ಲಾದ್ ಜೋಶಿ ರವರ ಭೇಟಿ ಮಾಡಿಲ್ಲ. ನಾನು ದೆಹಲಿಗೆ ಹೋಗುವ ಹೊತ್ತಿಗೆ, ಪ್ರಹ್ಲಾದ್ ಜೋಶಿಯವರು ಈ ಕಡೆಗೆ ವಾಪಸ್ ಬರುತ್ತಿದ್ದರು ಎಂದ ಗೃಹಸಚಿವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…