ಜಮೀನು ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡು ಕೊಲೆ ಪ್ರಕರಣವಾಗಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ಹಿನ್ನಲೆ :
ಏ.11 ರಂದು ಮನ್ಮನೆ ನಿವಾಸಿ ಲೇಖಪ್ಪ(36) ಜಮೀನು ಕೆಲಸಕ್ಕೆಂದು ಹೋದವನು ಮನೆಗೆ ವಾಪಾಸ್ ಬಾರದ ಹಿನ್ನಲೆಯಲ್ಲಿ ಏ.14ರಂದು ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು.
ಇಂದು ಕಡಸೂರು ಗ್ರಾಮದ ಹೊಳೆಯ ಸಮೀಪ ಲೇಖಪ್ಪನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಲೇಖಪ್ಪನ ಸಹೋದರ ಗ್ರಾಮದಲ್ಲಿ ರಾಜಕೀಯ ವಿಚಾರವಾಗಿ ದ್ವೇಷ ಹೊಂದಿದ್ದ ಕೃಷ್ಣಪ್ಪ ಎಂಬ ವ್ಯಕ್ತಿ ಕೊಲೆ ಮಾಡಿರುವ ಅನುಮಾನವಿದೆ. ಇದರ ಜೊತೆಗೆ ಕೃಷ್ಣಪ್ಪ ಸಲುಗೆಯಿಂದ ಇದ್ದ ಮಹಿಳೆ ಜೊತೆ ಲೇಖಪ್ಪನು ಕೂಡಾ ಚೆನ್ಬಾಗಿದ್ದು ತನ್ನ ಅನೈತಿಕ ಸಂಬಂಧ ಬಯಲಾಗುವ ಹಿನ್ನಲೆಯಲ್ಲಿ ಲೇಖಪ್ಪನನ್ನು ಕೃಷಪ್ಪ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೂರು ದಾಖಲಿಸಿದ್ದಾನೆ.
ಈ ಹಿನ್ನಲೆಯಲ್ಲಿ ಸೊರಬ ಪೊಲೀಸ್ ವೃತ್ತ, ಪಿಎಸ್ಐ ಸೊರಬ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ಈ ಪ್ರಕರಣದ ತನಿಖೆಯನ್ನು ಕೈಗೊಂಡು ಇಂದು ಆರೋಪಿತನಾದ ಮನ್ಮನೆಯ ಕೃಷ್ಣಪ್ಪ (36) ನನ್ನ ದಸ್ತಗಿರಿ ಮಾಡಿ ವಿಚಾರಣೆಗೊಳಪಡಿಸಿದೆ.
ಆರೋಪಿ ಕೃಷ್ಣಪ್ಪನು ಲೇಖಪ್ಪನ ಜೊತೆ ಇದ್ದ ರಾಜಕೀಯ ದ್ವೇಷ ಮತ್ತು ಮಹಿಳೆಯೊಂದಿಗಿನ ಸಂಬಂಧದ ಹಿನ್ನೆಲೆಯಲ್ಲಿ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಏ.11 ರಂದು ಬೆಳಗ್ಗೆ ಲೇಖಪ್ಪನನ್ನ ಮದುವೆಯಾಗುವ ಹುಡುಗಿಯ ಫೋಟೋ ತೋರಿಸುತ್ತೇನೆಂದು ಹೇಳಿ ತನ್ನ ಮನೆಗೆ ಕರೆಸಿಕೊಂಡು ಟವೆಲ್ ನಿಂದ ಲೇಖಪ್ಪನ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.
ಅದೇ ದಿನ ಸಂಜೆ ಮೃತ ದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಬೈಕ್ ನಲ್ಲಿ ತೆಗೆದುಕೊಂಡು ಹೋಗಿ ಕಡಸೂರು ಗ್ರಾಮದ ಹೊಳೆಯಲ್ಲಿ ಎಸೆದಿರುವುದು ವಿಚಾರಣೆಯಲ್ಲಿ ತಿಳಿದುಬಂದಿರುತ್ತದೆ.
ಒಟ್ಟಾರೆಯಾಗಿ ನಾಪತ್ತೆ ಪ್ರಕರಣ ಕೊಲೆ ಪ್ರಕರಣದಲ್ಲಿ ದುರಂತ ಅಂತ್ಯವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್