Headlines

ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ರಿಪ್ಪನ್‌ಪೇಟೆಯ ಯುವಕ ಸಚಿನ್ :

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಘಟನೆ ರಿಪ್ಪನ್‌ಪೇಟೆಯ ನೆಹರು ಬಡಾವಣೆಯಲ್ಲಿ ನಡೆದಿದೆ.

ರಿಪ್ಪನ್ ಪೇಟೆ ಗವಟೂರು ಗ್ರಾಮದ ನೆಹರು ಬಡಾವಣೆಯ ನಿವಾಸಿ  ದಿ|| ಶ್ರೀನಿವಾಸ್ ರವರ ಪುತ್ರ ಯುವಕ ಸಚಿನ್(25) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಾತ್ರಿ ಮನೆಯಲ್ಲಿ ತಾಯಿಯೊಂದಿಗೆ ಊಟ ಮುಗಿಸಿಕೊಂಡು ಪಕ್ಕದ ರೂಮಿನಲ್ಲಿ ಮಲಗಿದ್ದ ಸಚಿನ್ ಬೆಳಿಗ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮೃತನ ಮರಣೋತ್ತರ ಪರೀಕ್ಷೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *