ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ ಹಳ್ಳಿ ಹಾಗೂ ಹಲಗೇರಿ ಭಾಗಗಳ ಒಟ್ಟು 27.78 ಕಿಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ ಮತ್ತು ಅಭಿವೃದ್ಧಿ ಕೆಲಸಗಳಿಗೆ ರೂ 218.93 ಕೋಟಿಯ ಅಂದಾಜಿಗೆ ಮಂಜೂರಾತಿ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲಿದೆ ಎಂದಿದ್ದಾರೆ.

ಸಂಪೆಕಟ್ಟೆ – ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ರಾಷ್ಟ್ರೀಯ ಹೆದ್ದಾರಿ 766ಸಿಯ 55.60 ರಿಂದ ಕಿಮೀ 90.70 ರವರೆಗೆ ಸಂಪಕಟ್ಟೆ ಆಡುಗೋಡಿ ಯಿಂದ ಹೊಸನಗರದ ಮಾವಿನಕೊಪ್ಪ ವೃತ್ತ ಸಂಪರ್ಕಿಸುವ 14.50ಕಿಮೀ ಉದ್ದದ ಬೈಪಾಸ್ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದರಲ್ಲಿ ಸುಮಾರು 35.10 ಕಿಮೀ ಉದ್ದದ ಬಹುತೇಕ ಘಾಟಿ ರಸ್ತೆಯಾಗಿದ್ದು ಅತಿ ಅಪಾಯಕಾರಿ ಹಾಗೂ ಕ್ಲಿಷ್ಟಕರವಾದ ತಿರುವುಗಳಿಂದ ಕೂಡಿದೆ. ಇದರಲ್ಲಿ ಪ್ರಯಾಣಿಸುವುದು ದುಸ್ತರವಾಗಿದ್ದು, ಇದಕ್ಕೆ ಪರ್ಯಾಯವಾಗಿ ಕೇವಲ 14.50 ಕಿಮೀ ಉದ್ದದ ಬೈಪಾಸ್ ರಸ್ತೆಯನ್ನು ಹೊಸನಗರ ಮಾವಿನಕೊಪ್ಪ ವೃತ್ತದಿಂದ ಹೊಸನಗರ ಪಟ್ಟಣದ ಬೈಪಾಸ್ ರಸ್ತೆ ಸೇರಿದಂತೆ ಹೊಸನಗರದ ಹೋಲಿ ರಿಡೀಮರ್ ಶಾಲೆಯ ಹಿಂಭಾಗದಲ್ಲಿ ಹಾಗೂ ಬೆಕ್ಕೋಡಿ ಬಳಿ ಶರಾವತಿ ಹಿನ್ನೀರಿಗೆ 2 ಭಾರೀ ಸೇತುವೆ ಮತ್ತು ಆಡುಗೋಡಿ ಬಳಿ 2 ಸೇತುವೆಗಳ ನಿರ್ಮಾಣ ಮಾಡಲಾಗುತ್ತದೆ. ಈ ಭಾಗದ ಸುತ್ತ ಟಿಂಕೆ ಜೈಲು, ಎಲ್. ಗುಡ್ಡಕೊಪ್ಪ, ಹೆಬ್ಬುರ್ಲಿ, ಹೊಸೂರು ಗ್ರಾಮಗಳ ಮೂಲಕ ಆಡುಗೋಡಿ ಸೇರುವ ದ್ವಿಪಥದ ರಸ್ತೆಯನ್ನು 100 ಕಿಮೀ ವೇಗದಲ್ಲಿ ಸರಾಗವಾಗಿ ಚಲಿಸಲು ವಿನ್ಯಾಸಗೊಳಿಸಿ ಡಿಪಿಆರ್ ತಯಾರಿಸುವ ಕೆಲಸ ಪೂರ್ಣಗೊಂಡಿದೆ.

ಕೇಂದ್ರ ಭೂಸಾರಿಗೆ ಸಚಿವಾಲಯ 2022-23 ನೆಯ ಸಾಲಿನ ಕ್ರಿಯಾ ಯೋಜನೆಯಲ್ಲಿ 180 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದೆ. ಶೀಘ್ರದಲ್ಲಿ ಡಿಪಿಆರ್ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಈ ಬೈಪಾಸ್ ರಸ್ತೆ ನಿರ್ಮಾಣದಿಂದ ಸುರಕ್ಷಿತ ಪ್ರಯಾಣ, ಸಮಯ ಹಾಗು ಇಂದನ ವೆಚ್ಚ ಉಳಿತಾಯವಾಗುವುದರೊಂದಿಗೆ ಈ ಭಾಗದ ಹಿಂದುಳಿದ ಗ್ರಾಮಗಳ ಸಂಪರ್ಕ ಸಹ ಕಲ್ಪಿಸಬಹುದಾಗಿದೆ ಎಂದಿದ್ದಾರೆ.

ಇನ್ನು, ಈ ಯೋಜನೆಗೆ ಒಟ್ಟು 108 ಎಕರೆಯಷ್ಟು ಜಾಗದ ಅಗತ್ಯವಿದ್ದು ಇದರ ಪೈಕಿ 73 ಎಕರೆ ಜಾಗ ಕರ್ನಾಟಕ ಸರ್ಕಾರದ ಕೆಪಿಸಿ, ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ್ದು ಇವುಗಳ ಬಿಡುಗಡೆಗೆ ಸಹ ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮವಹಿಸಲಾಗಿದೆ. ಬಾಕಿ ಉಳಿದ ಭೂ ಮಾಲೀಕರ ಜಮೀನಿಗೆ ನಿಯಮಾನುಸಾರ ಪರಿಹಾರ ನೀಡಿ ಭೂಸ್ವಾಧೀನ ಮಾಡಲು ಸಹ ಅಗತ್ಯ ಕ್ರಮವಹಿಸಲಾಗಿದೆ ಎಂದಿದ್ದಾರೆ.


ಈ ಯೋಜನೆಯ ಅನುಮೋದನೆಗೆ ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರುಗಳಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

3 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago