ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ

ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.

ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ.

ಏನಿದು ಘಟನೆ?


ರಾಜನಂದಿನಿರವರು ಸಾಗರ ತಾಲೂಕಿನಾದ್ಯಂತ ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣ‌ ಶಿಬಿರವನ್ನ ಹಮ್ಮಿಕೊಂಡಿದ್ದಾರೆ. ಮೊನ್ನೆ ತಾಲೂಕಿನ ತ್ಯಾಗಾರ್ತಿಯಲ್ಲಿ ಆರೋಗ್ಯ ತಪಾಸಣ ಶಿಬಿರ ಮುಗಿಸಿ ಮಧ್ಯಾಹ್ನ 3-15 ರ ವೇಳೆಯಲ್ಲಿ ಶಿಬಿರದಲ್ಲಿ ಭಾಗಿಯಾದವರಿಗೆ ಸಾಗರದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ಮಾರಿಗುಡಿ ಬಳಿ ಅಡ್ಡಹಾಕಿದ ಮಂಜು;


ಊಟಕ್ಕೆ ರಾಜನಂದಿನಿಯವರು ತಮ್ಮ ಕಾರು ಬಿಟ್ಟು ಬೇರೆಯವರ ಕಾರಿನಲ್ಲಿ ಮುಂದೆ ಹೊರಟಿದ್ದಾರೆ. ಅದರ ಹಿಂದೆ ರಾಜನಂದಿನಿ *ಕಾರಿನ ಚಾಲಕ ಪ್ರಕಾಶ್ ಇತರರನ್ನ ಕೂರಿಸಿಕೊಂಡು ಹೊರಟಿದ್ದಾರೆ. ತ್ಯಾಗಾರ್ತಿಯ ಮಾರಿಗುಡಿ ಬಳಿಯ ಮುಖ್ಯ ರಸ್ತೆಯಲ್ಲಿ ಮಂಜು  ಎಂಬಾತನು ಪ್ರಕಾಶ್ ಚಲಿಸುತ್ತಿದ್ದ ಕಾರನ್ನ ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಎಲ್ಲಿಗೆ ಹೊರಟಿದ್ದೀಯ ಎಂದು ಕೇಳಿದ್ದಾನೆ.

ಮಂಜುವಿನ ಅವತಾರಕ್ಕೆ ನಡುಗಿಹೋಗಿದ್ದ ಚಾಲಕ ಪ್ರಕಾಶ್ ಮುಂದಿನ ಕಾರಿನಲ್ಲಿ ಮೇಡಂ ಹೋಗ್ತೀದ್ದಾರೆ. ನಾವೆಲ್ಲಾ ಕಾಗೋಡು ತಿಮ್ಮಪ್ಪ ಪೌಂಡೇಷನ್ ನಿಂದ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣೆ ಶಿಬಿರ ಮುಗಿಸಿಕೊಂಡು ಊಟಕ್ಕೆ ಸಾಗರಕ್ಕೆ ಹೋಗುತ್ತಿದ್ದೇವೆ ಎಂದಿದ್ದಾರೆ.



ರಾಜನಂದಿನಿ ದೊಡ್ಡುಕೋಲಾ!!!:


ರಾಜನಂದಿನಿ ದೊಡ್ಡ ಕೋಲಾ‌ ಅವಳು, ಇತ್ತೀಚೆಗೆ ಬಾರಿ ಹಾರಾಡುತ್ತಿದ್ದಾಳೆ. ಹೀಗೆ ಮಾಡುದ್ರೆ ಆಕೆಯನ್ನ ಸುಮ್ನೆ ಬಿಡೊಲ್ಲ, ನಾನು ಒಬ್ಬನೆ ಎಂದು ತಿಳ್ಕೊಬೇಡ ನನ್ನ ಹಿಂದೆ ಬಹಳ ಜನ ಇದ್ದಾರೆ. ಅವಳಿಗೆ ಹೇಳು ಕೊಲೆ ಮಾಡದೆ ಬಿಡುವುದಿಲ್ಲವೆಂದು ಎಂದು ಬೆದರಿಕೆ‌ಹಾಕಿದ್ದಾನೆ.


ಪ್ರಕಾಶ್ ಗೆ ಹೊಡೆಯಲು ಮುಂದಾದಾಗ ಕಾರಿನಲ್ಲಿ ಕುಳಿತವರೆಲ್ಲಾ ಕೂಗಿದ್ದಾರೆ. ಮಂಜುವಿನಿಂದ ತಪ್ಪಿಸಿಕೊಂಡು ಬಂದ ಪ್ರಕಾಶ್, ಕಾರು ಚಲಾಯಿಸಿಕೊಂಡು ಸಾಗರದ ಕಡೆ ವೇಗವಾಗಿ ಚಲಿಸಿದ್ದಾರೆ. ಇಷ್ಟಕ್ಕೂ ಬಿಡದ ಮಂಜು ನಾಲ್ಕು ಬೈಕ್ ನಲ್ಲಿ 8 ಜನರನ್ನ ಕೂರಿಸಿಕೊಂಡು ಕಾರನ್ನ ಹಿಂಬಾಲಿಸಿದ್ದಾನೆ.



ಕಾರು ಹಿಂಬಾಲಿಸಿ ಕೈಕಾಲು ಮುರಿಯುವುದಾಗಿ ಅವಾಜ್!:


ಮಳ್ಳಾ‌ ಕ್ರಾಸ್ ವರೆಗೂ ಹಿಂಬಾಲಿಸಿಕೊಂಡು ಬಂದ ಮಂಜ ಕಾರು ನಿಲ್ಲಿಸೋ ಕಾಲು ಮುರಿಯುತ್ತೇನೆ ಎಂದು ಕೂಗಿಕೊಂಡಿದ್ದಾನೆ. ಕಾರನ್ನ ಅಡ್ಡಗಟ್ಟಿ ರಾಜನಂದಿನಿರವರಿಗೆ ಅವ್ಯಚ್ಯಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಮಂಜು ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕಾಶ್ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಯಾರಿದು ಮಂಜು!!!!!


ರಾಜನಂದಿನಿಯವರ ಕಾರನ್ನ ಅಡ್ಡಹಾಕಿ ಕಾರಿನ ಚಾಲಕನನ್ನ ಅವಹೇಳನ ಮಾಡಿ ಮೇಡಂ ಮತ್ತು ಚಾಲಕನಿಗೆ ಬೆದರಿಕೆ ಹಾಕಿದ ಮಂಜು ಯಾರೆಂದು ಕುತೂಹಲಕ್ಕೆ ಕಾರಣವಾಗಿದೆ. ಮಂಜು ತ್ಯಾಗರ್ತಿ ಗ್ರಾಮದವನೇ ಆಗಿದ್ದು ಚಾಲಕ ಪ್ರಕಾಶ್ ಗೆ ಹತ್ತಿರ ಸಂಬಂಧಿ ಎಂದು ಹೇಳಲಾಗಿದೆ.


ಘಟನೆಯ ಬಗ್ಗೆ ರಾಜನಂದಿನಿಯವರ ಹೇಳಿಕೆಯ ವೀಡಿಯೋ ಇಲ್ಲಿ ವೀಕ್ಷಿಸಿ👇




ಮಾಹಿತಿ ಕೃಪೆ :@ಮಲೆನಾಡ ರಹಸ್ಯ…!

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

5 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago