ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿ ಎ ವಿಭಾಗದಲ್ಲಿ ಎರಡು ರ‍್ಯಾಂಕ್ ಪಡೆದ ಕಾಲೇಜು

ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದಿದ್ದಾರೆ.

ಬಿ.ಎ ವಿಭಾಗದಲ್ಲಿ ಕಾವ್ಯ ಸಿ 88.33% ಅಂಕ ಗಳಿಸುವುದರೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ಬಿ ಎ ವಿಭಾಗದಲ್ಲಿ ಸಿಂಧು ಜಿ 86.42% ಅಂಕ ಗಳಿಸಿ‌ ಒಂಬತ್ತನೆ
ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ುವೆಂಪು ವಿಶ್ವವಿದ್ಯಾಲಯದ ಎರಡು ರ‍್ಯಾಂಕ್ ಪಡೆದ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರತಾಳು ಹಾಲಪ್ಪ ,ಕಾಲೇಜು ಅಭಿವೃದ್ಧಿ ಸಮಿತಿ,ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹಾಗೂ ಹಳೆ ವಿದ್ಯಾರ್ಥಿಗಳ ಸಮಿತಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

1 hour ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

5 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

5 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

20 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

20 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago