ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು.

ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್ ಸರ್ಟಿಫಿಕೇಟ್ ಕೋರ್ಸ್ ಗಳ
February 2022 ತಿಂಗಳ ಇನ್ಪೋಸಿಸ್ ಸ್ಪ್ರಿಂಗ್ ಬೋರ್ಡ್ ನಲ್ಲಿ ಅತಿ ಹೆಚ್ಚು ಅಂಕಗಳಿಸಿ ಅಖಿಲ ಭಾರತ ಸ್ಪರ್ಧೆಯಲ್ಲಿ ಕರ್ನಾಟಕದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ   ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮೆರೆದಿದ್ದರು.

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್  ಬೋರ್ಡ್  ಪ್ರತಿ ತಿಂಗಳು ಪ್ರಕಟಿಸುವ  ಲಿಡರ್ ಬೋರ್ಡ್ ನಲ್ಲಿ ಕಾಲೇಜಿನ ಆರು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದರು.

1. ದ್ವೀತಿಯ ಬಿಬಿಎ ವಿದ್ಯಾರ್ಥಿನಿ ಚೈತ್ರ ಕೆ.ಸಿ ಒಟ್ಟು 300 ಸರ್ಟಿಫಿಕೇಟ್ ಗಳಿಸಿ 4000 ಅಂಕಗಳನ್ನು ಪಡೆದು ದೇಶದಲ್ಲೇ ಮೂರನೇ ಸ್ಥಾನ ಪಡೆದಿದ್ದಾರೆ.

2.ದ್ವೀತಿಯ ಬಿ.ಕಾಂ ವಿದ್ಯಾರ್ಥಿ ನವೀನ್. ಎನ್ ಒಟ್ಟು 265 ಸರ್ಟಿಫಿಕೇಟ್ ಗಳಿಸಿ 3600 ಅಂಕಗಳನ್ನು ಪಡೆದು ದೇಶದಲ್ಲೇ ನಾಲ್ಕನೆ ಸ್ಥಾನ ಪಡೆದಿದ್ದಾರೆ.

3.ಅಂತಿಮ ಬಿ.ಕಾಂ ವಿದ್ಯಾರ್ಥಿ ಮಾನಸ.ಕೆ.ಎಂ ಒಟ್ಟು 245 ಸರ್ಟಿಫಿಕೇಟ್ ಗಳಿಸಿ 3100 ಅಂಕಗಳನ್ನು ಪಡೆದು ದೇಶದಲ್ಲೇ ಏಳನೇ ಸ್ಥಾನ ಪಡೆದಿದ್ದಾರೆ.

4.ಪ್ರಥಮ ಬಿಕಾಂ ವಿದ್ಯಾರ್ಥಿ ನಿರಂಜನ್ ಒಟ್ಟು 256 ಸರ್ಟಿಫಿಕೇಟ್ ಗಳಿಸಿ 2700 ಅಂಕಗಳನ್ನು ಪಡೆದು ದೇಶದಲ್ಲೇ ಆರನೇ ಸ್ಥಾನ ಪಡೆದಿದ್ದಾರೆ.

5.ದ್ವೀತಿಯ ಬಿಬಿಎ ವಿದ್ಯಾರ್ಥಿ ತೀರ್ಥೇಶ್.ಟಿ ಒಟ್ಟು 213 ಸರ್ಟಿಫಿಕೇಟ್ ಗಳಿಸಿ 3000 ಅಂಕಗಳನ್ನು ಪಡೆದು ದೇಶದಲ್ಲೇ ಎಂಟನೇ ಸ್ಥಾನ ಪಡೆದಿದ್ದಾರೆ.

6.ದ್ವೀತಿಯ ಬಿಬಿಎ ವಿದ್ಯಾರ್ಥಿನಿ ನಿಸರ್ಗ ಒಟ್ಟು 212 ಸರ್ಟಿಫಿಕೇಟ್ ಗಳಿಸಿ 2600 ಅಂಕಗಳನ್ನು ಪಡೆದು ದೇಶದಲ್ಲೇ ಹತ್ತನೆ ಸ್ಥಾನ ಪಡೆದಿದ್ದಾರೆ.


ಈ ಸಾಧಕರ ಸಾಧನೆಯನ್ನು ಗುರುತಿಸಿ ಇನ್ಫೋಸಿಸ್ ಸಂಸ್ಥೆಯು ಸನ್ಮಾನಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕೊರ್ಸ ಗಳನ್ನು ಮಾಡಿ ಉತ್ತಮ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಯಶಸ್ವಿಯಾಗಿ ಎಂದು ಅಭಿನಂದಿಸಿದ್ದಾರೆ.

ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಂದ್ರಶೇಖರ್ ಮತ್ತು ಪ್ಲೇಸ್ಮೆಂಟ್ ಮುಖ್ಯಸ್ಥರಾದ ಡಾ.ರವೀಶ್ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

37 minutes ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago