ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು.


ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ ಜಯಪ್ರಕಾಶ್‌ರವರ ಅಗರ್‌ವುಡ್ ತೋಪಿನಲ್ಲಿ ವನದುರ್ಗಿ ಅಗರ್‌ವುಡ್ ಮರಗಳ ಕಟಾವು ಮತ್ತು ಸಂಸ್ಕರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಈ ಬೆಳೆಗೆ ಯಾವುದೇ ಸೌಲಭ್ಯಗಳಿಲ್ಲ, ಆದರೂ ರೈತರು ತಮ್ಮ ಜಮೀನಿನಲ್ಲಿ ಅಗರ್‌ವುಡ್ ಮರಗಳನ್ನು ಬೆಳೆಸುವುದರಿಂದ ಹೆಚ್ಚು ಲಾಭವಾಗುವುದು ಮರದ ಉತ್ಪನ್ನವನ್ನು ಮಾರಾಟ ಮಾಡುವುದು ಕಷ್ಟವಿಲ್ಲ. ಕಾರಣ ರೈತರು ತಮ್ಮ ಜಮೀನಿನಲ್ಲಿನ ಆರ್.ಟಿ.ಸಿ ಯಲ್ಲಿ ಬೆಳೆ ನಮೂದಾಗಿದ್ದರೆ ಕಂಪನಿಯವರು ನೇರವಾಗಿ ರೈತರ ಮನೆಗಳಿಗೆ ಭೇಟಿ ನೀಡಿ ಖರೀದಿಸುವ ವ್ಯವಸ್ಥೆಯಿದೆ. ಈ ಬೆಳೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಲಭಿಸುವುದು ಅಲ್ಲದೆ ಉದ್ಯೋಗವನ್ನು ಅರಸಿ ವಿದ್ಯಾವಂತರು ರೈತಾಪಿ ವರ್ಗ ಹೆಚ್ಚು ಅಲೆದಾಡುವ ಬದಲು ಸ್ಥಳೀಯವಾಗಿ ಸ್ವಾಲಂಭಿ ಉದ್ಯೋಗ ಪಡೆಯಲು ಸಹಕಾರಿಯಾಗುವುದು ಎಂದ ಅವರು ಮಳೆಗಾಲದ ಮೂರು ತಿಂಗಳು ಕೆಲಸ ಮಾಡುವ ಅಗತ್ಯ ಇಲ್ಲ ಉಳಿದಂತೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಸಲು ಸಹಕಾರಿಯೆಂದರು.


ಈ ಕಾರ್ಯಾಗಾರದಲ್ಲಿ ಶಿವಮೊಗ್ಗ ,ಸಾಗರ ,ತೀರ್ಥಹಳ್ಳಿ, ಕೊಪ್ಪ,ಶೃಂಗೇರಿ ಸೇರಿದಂತೆ ಅನೇಕ ಭಾಗಗಳಿಂದ ರೈತರು ಆಗಮಿಸಿದ್ದರು.

ವನದುರ್ಗಿ ಅಗರ್‌ವುಡ್ ಮರಗಳ ಕಟಾವು ಮತ್ತು ಸಂಸ್ಕರಣೆ ಕಾರ್ಯಕ್ರಮವನ್ನು ರಿಪ್ಪನ್‌ಪೇಟೆ ಸಮೀಪದ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ ಜಯಪ್ರಕಾಶ್‌ರವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಮಂಜುನಾಥಭಟ್, ವನದುರ್ಗಿ ಅಗರ್‌ವುಡ್ ಸಂಸ್ಥೆಯ ನಿರ್ದೇಶಕ ಧಮೇಂದ್ರ ಕುಮಾರ್,ಶೃಂಗೇರಿಯ ಸುಹಾಸ್ ಇನ್ನಿತರ ರೈತ ಸಮೂಹ ಉಪಸ್ಥಿತರಿದ್ದರು.




ಮಲೆನಾಡಿನಲ್ಲಿ ಅಗರ್ ವುಡ್ ಏಕೆ ಅಗತ್ಯ???

ಇತ್ತೀಚಿನ ವರ್ಷಗಳಲ್ಲಿ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿ ಕೊಂಡಿದ್ದಾರೆ. ನೀರಿನ ಕೊರತೆ, ಕೃಷಿ ಕಾರ್ಮಿಕರ ಕೊರತೆ, ರೋಗ ಭಾದೆ, ಇದೆಲ್ಲಾ ಸಂಕಷ್ಟಗಳ ಜೊತೆಗೆ ಇನ್ನೊಂದು ವಿಚಿತ್ರ ವಿಷಮ ಪರಿಸ್ಥಿತಿಯಲ್ಲಿ ಅಡಿಕೆ ಬೆಳೆಗಾರ ಸಿಲುಕಿಕೊಂಡಿದ್ದಾನೆ. ಅದೆಂದರೆ ಜಗತ್ತಿನಾದ್ಯಂತ ತಂಬಾಕು ಬಳಕೆಗೆ ಹೆಚ್ಚುತ್ತಿರುವ ವಿರೋಧ. ಅಡಿಕೆಗೆ ಇರುವ ಮಾರುಕಟ್ಟೆ ತಂಬಾಕಿನೊಂದಿಗೆ ತಳುಕು ಹಾಕಿಕೊಂಡಿರುವ ಕಾರಣ ತಂಬಾಕು ಬೆಳೆಗಾರರು ಕಷ್ಟಕ್ಕೆ ಸಿಲುಕಿಕೊಂಡಂತೆಯೇ ಅಡಿಕೆ ಬೆಳೆಗಾರ ಕೂಡಾ ಪರಿತಪಿಸುವಂತಾಗಿದೆ.

ಅಗರ್ ವುಡ್ ಎಂದರೇನು..????

ಅಗರ್ ವುಡ್ ಅಂತ ಕರೆಸಿಕೊಳ್ಳುವ ಮರ ಜಗತ್ತಿನಾದ್ಯಂತ ಅತ್ಯಂತ ಹೆಚ್ಚಿನ ಬೇಡಿಕೆಯಿರುವ ಔಧ್ ಎಂಬ ಸುವಾಸನಾ ದ್ರವ್ಯಕ್ಕೆ ಬಳಕೆಯಾಗುವಂಥದ್ದು, ಇದರ ಬಗ್ಗೆ ಅತ್ಯಂತ ಪ್ರಾಚೀನ ಉಲ್ಲೇಖವಿರುವುದು ನಮ್ಮ ವೇದಗಳಲ್ಲೇ. ಹಾಗಾಗಿ ಸಾವಿರಾರು ವರ್ಷಗಳ ಹಿಂದೆಯೇ ಇದರ ಉಪಯೋಗ ಭಾರತೀಯರಿಗೆ ತಿಳಿದಿತ್ತು. ಸಂಸ್ಕೃತದಲ್ಲಿ ಇದನ್ನು ಅಗುರು ಅನ್ನುವ ಹೆಸರಿನಿಂದ ಕರೆಯುತ್ತಾರೆ. ಕನ್ನಡದಲ್ಲೂ ಅದೇ ಹೆಸರು ಬಳಕೆಯಲ್ಲಿದೆ. ಆಕ್ವಿಲೇರಿಯಾ ಅಂತ ವೈಜ್ಞಾನಿಕವಾಗಿ ಕರೆಯಲ್ಪಡುವ ಒಂದು ಸಸ್ಯಪ್ರಭೇಧವೇ ಈ ಅಗರ್ ವುಡ್. ಮಳೆಕಾಡುಗಳಲ್ಲಿ ಬೆಳೆಯುವ ಈ ಮರದಲ್ಲಿ ಸುಮಾರು ಹದಿನೇಳು ಉಪಜಾತಿಗಳಿವೆ.

ಈ ಮರಗಳಿಗೆ ಒಂದು ರೀತಿಯ ಶಿಲೀಂದ್ರ (ಫಂಗಸ್) ಸೋಂಕು ಉಂಟಾಗಿ ಈ ಮರಗಳ ತಿರುಳಿನ ಭಾಗದಲ್ಲಿ ದಟ್ಟ ಕಂದು – ಕಪ್ಪು ಬಣ್ಣದ ಅಂಟು ಸ್ರವಿಸುತ್ತದೆ ಮತ್ತು ಕೆಲ ವರ್ಷಗಳಲ್ಲಿ ಮರದ ತಿರುಳು ಗಟ್ಟಿಯಾಗಿ ಕಡು ಕಂದುಬಣ್ಣಕ್ಕೆ ತಿರುಗುತ್ತದೆ. ಇದು ಅತ್ಯಂತ ಸುವಾಸನಾಯುಕ್ತವಾಗಿದ್ದು ಇದನ್ನು ಉರಿಸಿದರೆ ಆಹ್ಲಾದಕರವಾದ ಪರಿಮಳ ಬರುತ್ತದೆ. ಇದರಿಂದ ತೈಲವನ್ನೂ ತಯಾರಿಸಲಾಗುತ್ತದೆ. ಹಾಗಾಗಿ ಇದಕ್ಕೆ ಜಾಗತಿಕವಾಗಿ ಬಹಳಷ್ಟು ಬೇಡಿಕೆ ಮತ್ತು ಬಹಳ ಬೆಲೆಯೂ ಇದೆ. ಹೆಚ್ಚಾಗಿ ಯುರೋಪ್ ಮತ್ತು ಅರಬ್ ದೇಶಗಳಲ್ಲಿ ಇದಕ್ಕೆ ಬೇಡಿಕೆ ಹೆಚ್ಚು. ಸುಗಂಧ ದ್ರವ್ಯ ತಯಾರಿಕಾ ಕೈಗಾರಿಕೆಗಳೂ ಇದನ್ನು ಬಳಸಿಕೊಂಡು ಅತ್ಯುಕೃಷ್ಟವಾದ ಸುಗಂಧವನ್ನು ತಯಾರಿಸುತ್ತದೆ. ಫ್ರಾನ್ಸ್ ದೇಶದ ಖ್ಯಾತ ಪರ್ಫ್ಯೂಮ್ ಕಂಪೆನಿಗಳು ಔಧ್ ಹೆಸರಿನ ಅತ್ಯುಕೃಷ್ಟ ಮತ್ತು ಅತಿ ಬೆಲೆಬಾಳುವ ಸುಗಂಧವನ್ನು ತಯಾರಿಸುತ್ತವೇ. ಹೀಗಾಗಿ ಅಗರ್ ವುಡ್ ಗೆ ಜಾಗತಿಕವಾಗಿ ಒಳ್ಳೆಯ ಬೇಡಿಕೆ ಮತ್ತು ಬೆಲೆ ಎರಡೂ ಇದೆ.

ಮಾಮೂಲಿಯಾಗಿ ದಟ್ಟ ಮಳೆಕಾಡುಗಳಲ್ಲಿ ಬೆಳೆಯುವ ಆಕ್ವಿಲೇರಿಯಾ ಪ್ರಭೇದದ ಹಲವಾರು ಉಪಜಾತಿಯ ಮರಗಳಿಗೆ ಒಂದು ನಿರ್ದಿಷ್ಟ ಶಿಲೀಂಧ್ರ ಸೋಂಕು ಉಂಟಾಗಿ ಆ ಮರದ ತಿರುಳಿನಲ್ಲಿ ಅಗರ್ ವುಡ್ ಉತ್ಪತ್ತಿಯಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಆಕ್ವಿಲೇರಿಯಾ ಜಾತಿಯ ಮರಗಳು ವಿನಾಶದ ಅಂಚಿನಲ್ಲಿದ್ದು ಕಾಡಿನಲ್ಲಿ ಸಹಜವಾಗಿ ಸಿಗುವ ಅಗರ್ ವುಡ್ ತೀರಾ ದುರ್ಲಭವಾಗಿದೆ.

ಹಾಗಾಗಿ ಅಗರ್ ವುಡ್ ನ ಕೃಷಿ ಶುರುವಾಯಿತು. ಆಕ್ವಿಲೇರಿಯಾ ಮರಗಳಲ್ಲಿ ಕೆಲವು ಉಪಜಾತಿಗಳನ್ನು ಗುರುತಿಸಿ ಅವುಗಳಿಗೆ ಶಿಲೀಂಧ್ರವನ್ನು ಇಂಜೆಕ್ಷನ್ ಮೂಲಕ ಚುಚ್ಚಿ ಕೃತಕವಾಗಿ ಸೋಂಕಿಗೊಳಪಡಿಸಲಾಗುತ್ತದೆ. ಹೀಗೆ ಶಿಲೀಂದ್ರ ಸೋಂಕಿಗೊಳಗಾದ ಮರಗಳ ತಿರುಳಿನಲ್ಲಿ ಆ ವಿಶಿಷ್ಟ ಪರಿಮಳದ ಅಂಟು ಉತ್ಪತ್ತಿಯಾಗಿ ಕೆಲ ವರ್ಷಗಳಲ್ಲಿ ಅದು ತಿರುಳಿನ ತುಂಬಾ ವ್ಯಾಪಿಸಿ ಗಟ್ಟಿಯಾಗುತ್ತದೆ. ಇದೇ ಅಗರ್ ವುಡ್. ಭಾರತದಲ್ಲಿ ಮೊದಲಿಗೆ ಅಸ್ಸಾಮ್ ನಲ್ಲಿ ಈ ರೀತಿ ಅಗರ್ ವುಡ್ ನ ಕೃತಕ ಕೃಷಿ ಪ್ರಾರಂಭವಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

6 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

6 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

6 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

13 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

17 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

17 hours ago