ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುತ್ತಿರುವುದು ಹೆಚ್ಚಾಗುತ್ತಿದೆ ಇದಕ್ಕೆ ಉದಾಹರಣೆ ಎಂಬಂತೆ ನಿನ್ನೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ಎಂಬುವವನು ಮನೋಜ್ ಕುಗ್ವೆ ಎಂಬುವವರ ಮೇಲೆ ಹಲ್ಲೆ ನಡೆಸಿರುವುದೇ ತಾಜಾ ನಿದರ್ಶನ ಈ ಅರುಣ್ ಕುಗ್ವೆ ಒಬ್ಬ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು ಈತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಸಾಗರ ಕ್ಷೇತದ ಶಾಸಕರ ಆಡಳಿತದಲ್ಲಿ ರೌಡಿಸಂ ದಬ್ಬಾಳಿಕೆ ಮೂಲಕ ಭೂಮಾಫಿಯಾದಲ್ಲಿ ಶಾಮೀಲಾಗಿ ಸಾಮಾನ್ಯ ಜನರ ಮೇಲೆ ದಬ್ಬಾಳಿಕೆ ಹೆಚ್ಚಾಗಿದ್ದು, ಎಂಡಿಎಫ್ ಗಲಾಟೆಯೇ ಅದಕ್ಕೆ ಉದಾಹರಣೆ. ಇಲ್ಲಿಯವರೆಗೂ ಆ ಗಲಾಟೆಯಲ್ಲಿ ಪಾಲ್ಗೊಂಡವರ ಮೇಲೆ ಯಾವುದೇ ಕ್ರಮ ಕೈಗೊಳ್ಳುವ ಯೋಗ್ಯತೆ ಸರ್ಕಾರಕ್ಕಾಗಲಿ, ಶಾಸಕರಿಗಾಗಲಿ, ಪೊಲೀಸ್ ಇಲಾಖೆಗಾಗಲಿ ಇಲ್ಲದಿರುವುದೇ ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು

ನಿನ್ನೆಯ ದಿನ ಮನೋಜ್ ಕುಗ್ವೆ ಎಂಬುವವರ ಮೇಲೆ ಹಲ್ಲೆ ನಡೆಸಿರುವುದಲ್ಲದೆ, ಆಸ್ಪತ್ರೆಗೆ ನುಗ್ಗಿ ತಲೆ ಹೊಡೆದಿದ್ದಾರೆ. ಇಂತಹ ಸುಸಂಸ್ಕೃತ ಕ್ಷೇತ್ರ ಸಾಗರದಲ್ಲಿ ಈ ರೀತಿಯ ಘಟನೆ ನಡೆಯುತ್ತಿರುವುದು ಖೇದಕರ!!, ಪೊಲೀಸ್ ಇಲಾಖೆಗೆ ನೈತಿಕತೆ ಇದ್ದಲ್ಲಿ ಅರುಣ್ ಕುಗ್ವೆ ಮೇಲೆ ಕ್ರಮ ತೆಗೆದುಕೊಳ್ಳಬೇಕು ಒಂದು ವೇಳೆ ತೆಗೆದುಕೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು

ಸಾಗರ ಕ್ಷೇತ್ರದಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಕೆಲವು ಕಿಡಿಗೇಡಿಗಳಿಗೆ ಶಾಸಕರ ಬೆಂಬಲವಿದ್ದು ಗೃಹ ಸಚಿವರ ಮೂಲಕ ಅವರ ಮೇಲೆ ಯಾವುದೇ ದೂರು ದಾಖಲಾಗದಂತೆ ನೋಡಿಕೊಳ್ಳುತ್ತಾರೆ

ಸಾಗರದಲ್ಲಿರುವ ಎಎಸ್ಪಿ ರೋಹನ್ ಜಗದೀಶ್ ರವರು ದಕ್ಷ ಅಧಿಕಾರಿಯಾಗಿದ್ದಾರೆ ಅವರ ಮೇಲೆ ನಂಬಿಕೆ ಯಿಂದ ಬಂದು ನಮ್ಮ ಮನವಿ ಕೊಟ್ಟಿದ್ದೇವೆ ನಮ್ಮ ಮನವಿಯನ್ನು ಅವರು ಪುರಸ್ಕರಿಸುತ್ತಾರೆಂಬ ಅಚಲವಾದ ನಂಬಿಕೆಯಿದೆ ಎಂದರು.

ಈ ಹಿಂದೆ ಹಲವು ಬಾರಿ ಗಡಿ ಗಡಿಪಾರಾಗಿರುವ ಅರುಣ್ ಕುಗ್ವೆ ಸಾಗರ ಕ್ಷೇತ್ರದಲ್ಲಿ ತನ್ನ ಪಟಾಲಂ ಕಟ್ಟಿಕೊಂಡು ದಬ್ಬಾಳಿಕೆ ಹಾಗೂ ರಾಬರಿ ಪ್ರಕರಣಗಳಲ್ಲಿ ಕಂಡು ಬಂದಿರುತ್ತಾನೆ ಆ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ಆತನ ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾಗರ ನಗರಸಭೆ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ಜಿ.ಪಂ ಮಾಜಿ ಸದಸ್ಯೆ ಅನಿತಾ ಕುಮಾರಿ,ಅಶೋಕ್ ಬೇಳೂರು,ರವಿ ಕುಗ್ವೆ,  ವಿ.ಶಂಕರ್, ಯಶ್ವಂತ್ ಫಣಿ,ಸಂತೋಷ್ ಸದ್ಗುರು,ರವಿ ಲಿಂಗನಮಕ್ಕಿ. ತಾರಮೂರ್ತಿ,ಅನ್ವರ್,ಸಲೀಂ,ರಮೇಶ್ ಚಂದ್ರಗುತ್ತಿ,ಹಂಸ ರಾಮನಗರ,ಚಿನ್ಮಯ್ ಮೊದಲಾದವರು ಇದ್ದರು.

ಪ್ರತಿಭಟನೆಯ ವೀಡಿಯೋ ಇಲ್ಲಿ ವೀಕ್ಷಿಸಿ👇




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

7 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

7 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

11 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

13 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

14 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

23 hours ago