ಶಿವಮೊಗ್ಗದಲ್ಲಿ ಮೇ 27ರಂದು ಬೃಹತ್ ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳಿಂದ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9108235132 /9482023412 ಗಳನ್ನು ಸಂಪರ್ಕಿಸುವುದು.

ಉದ್ಯೋಗ ಮೇಳಕ್ಕೆ ಹೋಗುವ ಮುನ್ನ ಇದನ್ನು ಮರೆಯಬೇಡಿ :

* ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಹತೆ, ವಿಳಾಸ ದೃಢೀಕರಣ, ಫೋಟೊ ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬೇಕು.

*ದಾಖಲೆಗಳು ಕನಿಷ್ಠ ಹತ್ತು ಸೆಟ್‌ನಲ್ಲಿದ್ದರೆ ಒಳ್ಳೆಯದು. ಕೆಲವು ಮೇಳಗಳಲ್ಲಿ ಒಬ್ಬ ಅಭ್ಯರ್ಥಿಗೆ ಕನಿಷ್ಠ ಹತ್ತು ಕಂಪನಿಗಳ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗಿರುತ್ತದೆ.

* ಮೂಲ ದಾಖಲೆಗಳನ್ನೂ ತೆಗೆದುಕೊಂಡು ಹೋಗಲು ಮರೆಯದಿರಿ.

* ಸಭ್ಯ ಉಡುಗೆ ತೊಟ್ಟುಕೊಳ್ಳಿ. ಮೇಳದಲ್ಲಿ ಹೆಚ್ಚು ಸಮಯ ಕಾದರೂ ಫ್ರೆಶ್‌ ಆಗಿ ಕಾಣುವಂತೆ ಎಚ್ಚರಿಕೆ ವಹಿಸಿ.

* ನಿಮ್ಮ ದಾಖಲೆಗಳನ್ನು ಸರಿಯಾಗಿ ಫೈಲ್‌ ಮಾಡಿ ಇಟ್ಟುಕೊಳ್ಳಿ.ಯಾವ ದಾಖಲೆ ಕೇಳಿದರೂ ತಕ್ಷಣ ತೆಗೆದುಕೊಡುವಂತೆ ನೀವೇ ಪೈಲ್‌ ಮಾಡಿಕೊಳ್ಳಿ.

* ಮೇಳದಲ್ಲಿ ಯಾವೆಲ್ಲಾ ಕಂಪನಿಗಳು ಭಾಗವಹಿಸುತ್ತಿವೆ, ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಂಡೇ ಮುಂದುವರೆಯಿರಿ.

* ಆಯೋಜಕರ ಸಂಪರ್ಕ ಸಂಖ್ಯೆ ನೀಡಿದ್ದರೆ, ಈ ಬಗ್ಗೆ ಮಾತನಾಡಿ. ನಿಮಗೆ ಅಗತ್ಯವಿರುವ ಮಾಹಿತಿ ಪಡೆದುಕೊಳ್ಳಲು ಹಿಂಜರಿಯಬೇಡಿ.

*ಮೇಳದಲ್ಲಿ ಆತ್ಮವಿಶ್ವಾಸದಿಂದ ಭಾಗವಹಿಸಿ. ಹೆದರಿಕೆ, ಭಯ ಬೇಡ.

ಮೇಳಕ್ಕೆ ಹೋಗುವ ಮುನ್ನ…

* ಯಾವ ರೀತಿಯ ಕೆಲಸಕ್ಕೆ ನಾನು ಸೂಕ್ತ, ಯಾವುದನ್ನು ಆಯ್ಕೆ ಮಾಡಿಕೊಳ್ಳಬಹುದು, ಯಾವುದಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂಬುದನ್ನು ಮೊದಲೇ ನಿರ್ಧರಿಸಿಕೊಳ್ಳಿ. ಹೆಚ್ಚು ಅವಕಾಶವಿದ್ದಾಗ ಗೊಂದಲಕ್ಕೆ ಬೀಳಬೇಡಿ.

* ನಿಮ್ಮ ವೇತನ ಎಷ್ಟಿರಬೇಕು, ಎಲ್ಲಿ ಕೆಲಸ ಸಿಕ್ಕರೆ ಮಾಡಬಹುದು ಎಂಬುದನ್ನು ಮೊದಲೇ ಯೋಚಿಸಿರಿ. ಇದರ ಆಧಾರದ ಮೇಲೆಯೇ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಿ.

* ಅತಿ ಕಡಿಮೆ ಸಮಯದ ‘ಸಂದರ್ಶನ’ಕ್ಕೆ ಸದಾ ಸಿದ್ಧರಾಗಿರಿ. ಕಡಿಮೆ ಅವಧಿಯಲ್ಲಿ ನಿಮ್ಮ ಪರಿಚಯ ಮಾಡಿಕೊಡುವುದನ್ನು ಕಲಿತುಕೊಳ್ಳಿ.

* ಸಮಯಕ್ಕೆ ಸರಿಯಾಗಿ ಮೇಳಕ್ಕೆ ಹಾಜರಾಗಿ. ಹೆಸರು ಎಲ್ಲಿ ನೊಂದಾಯಿಸಬೇಕು, ಹೇಗೆ ಪ್ರಕ್ರಿಯೆಗಳು ನಡೆಯಲಿವೆ ಎಂಬುದನ್ನು ತಿಳಿದುಕೊಂಡೇ ಮುಂದುವರೆಯಿರಿ.

* ನಿಮ್ಮ ವಿದ್ಯಾರ್ಹತೆ, ಅನುಭವ, ವಯಸ್ಸು, ಕುಟುಂಬದ ಬಗ್ಗೆ ಕೇಳಲಾಗುವ ಪ್ರಶ್ನೆಗಳಿಗೆ ಪ್ರಮಾಣಿಕತೆಯಿಂದ ಉತ್ತರಿಸಿ. ಏನನ್ನಾದರೂ ಮುಚ್ಚಿಟ್ಟು ಉದ್ಯೋಗ ಪಡೆಯುವ ಯತ್ನ ಬೇಡ.

* ಯಾವುದೇ ಕಂಪನಿ ಆಫರ್‌ ನೀಡಿದರೆ ಕೆಲಸ ಏನು, ವೇತನ ಎಷ್ಟು ಸಿಗುತ್ತದೆ, ಯಾವಾಗಿನಿಂದ ಕೆಲಸಕ್ಕೆ ಬರಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಪಡೆದುಕೊಳ್ಳಿ. ಈ ವಿಷಯಗಳನ್ನು ಕೇಳಿ ತಿಳಿದುಕೊಳ್ಳಲು ಸಂಕೋಚಪಡಬೇಡಿ.

* ನೀವು ಆಯ್ಕೆ ಮಾಡಿಕೊಳ್ಳುವ ಕಂಪನಿಯ ಬಗ್ಗೆ ಒಂದಿಷ್ಟು ಬೇಸಿಕ್‌ ಮಾಹಿತಿ ಪಡೆದುಕೊಂಡಿರಿ. ಗೊತ್ತಿಲ್ಲದಿದ್ದರೆ ಪ್ರತಿನಿಧಿಗಳನ್ನು ಕೇಳಿತಿಳಿದುಕೊಳ್ಳಿ. ಯಾವುದೇ ವಿಷಯವನ್ನು ಕೇಳಿ ತಿಳಿದುಕೊಳ್ಳುವುದು ದಡ್ಡತನವಲ್ಲ ಎಂಬುದನ್ನು ಮರೆಯಬೇಡಿ.

*ಮೇಳದಲ್ಲಿ ಉತ್ಸಾಹದಿಂದಿರಿ, ಕ್ಯೂನಲ್ಲಿ ನಿಂತಾಗ ಅಕ್ಕಪಕ್ಕದವರೊಂದಿಗೆ ಮಾತನಾಡಿ, ಪರಿಚಯ ಮಾಡಿಕೊಳ್ಳಿ. ಆದರೆ ತಲೆಹರಟೆ ಮಾಡಬೇಡಿ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

7 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

21 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

22 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

22 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

23 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago