ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ.
ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ.
ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಇದನ್ನ ಹುಡುಕಿಕೊಂಡು ಹೋಗಿದ್ದು, ಭರತ್ ಫೌಂಡರಿಯ ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಲುಕಿಕೊಂಡಿರುವುದು ಕಂಡು ಬಂದಿದೆ.
ಈ ಮಗು ಹೇಗೆ ತೇಲಿ ಬಂತು ಮತ್ತು ಮಗುವಿನ ಸಾವಿಗೆ ಕಾರಣಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
