Headlines

ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ.
ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ.
ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ  ಎಸ್ ಡಿ ಪಿ ಐ ಕಾರ್ಯಕರ್ತರು ಇದನ್ನ ಹುಡುಕಿಕೊಂಡು ಹೋಗಿದ್ದು, ಭರತ್ ಫೌಂಡರಿಯ ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಲುಕಿಕೊಂಡಿರುವುದು ಕಂಡು ಬಂದಿದೆ. 
 ಈ ಮಗು ಹೇಗೆ ತೇಲಿ ಬಂತು ಮತ್ತು ಮಗುವಿನ ಸಾವಿಗೆ ಕಾರಣಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *