ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ.
ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್
ಬಾಟಲ್ ಗಳನ್ನು ಮನಸೋ ಇಚ್ಛೆ ಬಿಸಾಕಿದ್ದಾರೆ.
ಬೀಟ್ಸ್ ನಡೆಸುತ್ತಿದ್ದ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳಾದ ರಮೇಶ್, ಯೋಗೇಶ್ವರಪ್ಪ ಈ ಮೂವರಿಗೆ ಅರಣ್ಯ ಜಾಗದಲ್ಲಿ ಮದ್ಯ ಸೇವಿಸುವಂತಿಲ್ಲ. ಇದು ಅತಿಕ್ರಮಣ ಪ್ರವೇಶವಾಗುತ್ತದೆ ಮತ್ತು ಗಲೀಜು ಮಾಡುವಂತಿಲ್ಲ ಎಂದು ತಿಳಿ ಹೇಳಿದ್ದಾರೆ. ಆದರೂ ಈ ಮೂವರು
ಮದ್ಯಪಾನ ಸೇವನೆ ಮುಂದುವರೆಸಿದ್ದಾರೆ.
ನಂತರ ಸಿಬ್ಬಂದಿ ರಮೇಶ್ ಗೆ ನೀನು ಯಾರು ಎಂದು ಪ್ರಶ್ನಿಸಿದ ಹರೀಶ್ ನಿಮ್ಮನ್ನ ಕೊಲೆ ಮಾಡುತ್ತೇವೆ ಎಂದು ಬೆದರಿಸಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಹರೀಶ್ ಜೊತೆಗಿದ್ದ ಸೋಮಣ್ಣ ಮತ್ತು ಚಂದ್ರಪ್ಪ ಸಿಬ್ಬಂದಿ ಯೋಗೇಶ್ವರ್ ಮೇಲೂ ಹಲ್ಲೆ ನಡೆಸಿದ್ದಾರೆ.ಯೋಗೇಶ್ವರ್ ಕಣ್ಣು ಮೂಗಿನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಬಂದ ಶಿವರಾಜ್ ಮಹೇಶ್ ಲಕ್ಷ್ಮಣ್ ಎಂಬುವರು ಜಗಳ ಬಿಡಿಸಿದ್ದಾರೆ.
ಮೇಲಾಧಿಕಾರಿಗಳಿಗೆ ವಿಷಯ ತಿಳಿಸಲು ರಮೇಶ್ ಮೊಬೈಲ್ ತೆಗೆದಾಗ ಹರೀಶನು ಮೊಬೈಲ್ ಕಸಿದುಕೊಂಡು ನೆಲಕ್ಕೆ ಬಡಿದು ಹಾನಿ ಮಾಡಿದ್ದಾನೆ. ಈ
ಹಿನ್ನಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಅತಿಕ್ರಮಣ ಪ್ರವೇಶಿಸಿ ಮದ್ಯಸೇವನೆ ಮಾಡಿ, ಸಿಬ್ಬಂದಿ ರಮೇಶ್ ನ ಮೊಬೈಲ್ ಒಡೆದು ಹಾಕಿ ನಂತರ ಯೊಗೇಶ್ವರ್ ಗೆ
ಮಾರಣಾಂತಿಕ ಹಲ್ಲೆ ನಡೆಸಿದ ಹರೀಶ್,ಸೋಮಣ್ಣ ಮತ್ತು ಚಂದ್ರಪ್ಪನ ವಿರುದ್ಧ ಮಾಳೂರು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್