ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ.
ಈ ಪ್ರಕರಣವನ್ನು ನೋಡುತ್ತಿದ್ದರೆ ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ
ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ ಬೆದರಿಕೆ ಹಾಕಿ ಬಂಧನಕ್ಕೊಳಗಾದ ಸಲ್ಮಾನ್,ಅಬ್ಬಾಸ್ ಮತ್ತು ಉಸ್ಮಾನ್ ರಲ್ಲಿ ಉಸ್ಮಾನ್ ಮತ್ತು ಅಬ್ಬಾಸ್ ಭರತನ ಚಿಕ್ಕಮ್ಮನಿಗೆ ಧಮ್ಮಿ ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ.
ಜಾಮೀನಿನ ಹಿನ್ನಲೆಯಲ್ಲಿ ಮೂವರು ಜೈಲಿನಿಂದ ಬಿಡುಗಡೆಯಾಗಿ ನ್ಯೂ ಮಂಡ್ಲಿ ಶಿವಶಂಕರ್ ರೈಸ್ ಮಿಲ್ ಬಳಿಯಿರುವ ಭರತ್ ನ ಚಿಕ್ಕಮ್ಮನ ಮನೆ ಹತ್ತಿರ ಹೋಗಿ ಭರತ್ ನ ಚಿಕ್ಕಮ್ಮ ಕಲಾವತಿಯನ್ನ ಅಡ್ಡಗಟ್ಟಿ ನಮ್ಮ ಮೇಲೆ ಭರತ್ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾನೆ. ಭರತ್ ಮತ್ತು ಸುಮಂತ್ ಇಬ್ಬರಿಗೂ ಹೇಳಿ ಎಷ್ಟೇ ದೂರು ಕೊಟ್ಟರೂ ಅವರು ಉಳಿಯೋಲ್ಲ ಅಂತ ಇಬ್ಬರನ್ನೂ ಮುಗಿಸುತ್ತೇವೆ ಎಂದು ಅವ್ಯಾಚ್ಯ ಶಬ್ದಗಳಿಂದ ಬೈದು ನೀವು ನಮ್ಮನ್ನ ಏನೂ ಮಾಡಿಕೊಳ್ಳಲು ಆಗುವುದಿಲ್ಲವೆಂದು ಬೆದರಿಕೆ ಹಾಕಿ ಹೋಗಿದ್ದಾರೆ. ಈ ಬಗ್ಗೆ ಭರತನ ಚಿಕ್ಕಮ್ಮ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.
ಏ.23 ರಂದು ಸಲ್ಮಾನ್, ಅಬ್ಬಾಸ್ ಮತ್ತು ಉಸ್ಮಾನ್ ಹಿಂದೂ ಕಾರ್ಯಕರ್ತರಾದ ಸುಮಂತನನ್ನ ಹುಡುಕಿಕೊಂಡು ಬಂದು ಸಿಗದಿದ್ದ ಕಾರಣಕ್ಕೆ ಅವರ ಸಹೋದರ ಭರತ್ ಗೆ ಲಾಂಗು ಮಚ್ಚು ತೀರಿಸಿ ಆತನ ಮೇಲೆ ಎಷ್ಟು ಹೊತ್ತಾದರೂ ಕೊಲೆ ಮಾಡುವೆ ಎಂದು ಬೆದರಿಸಿದ ಘಟನೆ ಮತ್ತು ಈ ಮೂವರು ಗಾಂಜಾ ಸೇವಿಸಿ ಧಮ್ಮಿ ಹಾಕಿದ್ದರು ಎಂಬ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಅರೆಸ್ಟ್ ಮಾಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್