ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.
ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಆಮ್ ಆದ್ಮಿ ಪಕ್ಷದ ಸಂಚಾಲಕ ಅಮೃತರಾಜ್ ಮಾತನಾಡಿ ಪ್ರಸ್ತುತ ರಾಜಕೀಯದ ಕೋಮುವಾದ ರಾಜಕಾರಣಕ್ಕೆ ಬೇಸತ್ತು ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳನ್ನು ಮೆಚ್ಚಿಕೊಂಡು ಆಪ್ ಗೆ ಇಂದು ಸಂಜೆ ಸೇರಿದ್ದಾರೆ ಎಂದರು. ಕೆ ದಿವಾಕರ್ ಅವರು ಸಾಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಆಮ್ ಆದ್ಮಿ ಪಾರ್ಟಿ ಸಂಘಟಿತವಾಗುತ್ತಿದೆ ಮುಂದಿನ ದಿನಗಳಲ್ಲಿ ಸಾಗರ ವಿಧಾನಸಭಾ ಕ್ಷೇತ್ರವನ್ನು ಆಮ್ ಆದ್ಮಿ ಪಕ್ಷ ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದರು.
ಸ್ವಾಗತ ಕೋರಿದ ಹೊಸನಗರ ತಾಲೂಕ್ ಆಮ್ ಆದ್ಮಿ ಘಟಕ
ಇಂದು ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಕೆ ದಿವಾಕರ್ ರವರಿಗೆ ಹೊಸನಗರ ತಾಲೂಕ್ ಆಮ್ ಆದ್ಮಿ ಘಟಕದ ಅಧ್ಯಕ್ಷರಾದ ಗಣೇಶ್ ಸೂಗೋಡು, ಉಪಾಧಕ್ಷರಾದ ಹಸನಬ್ಬ ಹಾಗೂ ಈಶ್ವರಪ್ಪ ಗೌಡ, ಮಹಮ್ಮದ್ ಹನೀಫ಼್ ಮತ್ತು ನಾಸೀರ್ ರವರು ಸ್ವಾಗತ ಕೋರಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್