ಹೊಸನಗರದ ನೂತನ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಬಿ ಸಿ ಗಿರೀಶ್ ರವರು ಸಾಗರ ಪಟ್ಟಣದಲ್ಲಿ ಉತ್ತಮ ಆಡಳಿತ ನೀಡಿ ಜನಸ್ನೇಹಿ, ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡು ಸಾರ್ವಜನಿಕ ವಾಗಿ ಉತ್ತಮ ಬಾಂದವ್ಯ ಹೊಂದಿದ್ದರು.
ಹೊಸನಗರಕ್ಕೆ ಖಡಕ್ ಸರ್ಕಲ್ ಗಿರೀಶ್ ಬಿ ಸಿ ವರ್ಗಾವಣೆ ಮಾಹಿತಿ ತಿಳಿಯುತ್ತಿದ್ದಂತೆ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಾದ ನಗರ ಮತ್ತು ರಿಪ್ಪನ್ ಪೇಟೆ ಯಲ್ಲಿ ಹಗಲಿರುಳು ನಡೆಯುತ್ತಿರುವ ಮರಳು ಮಾಫಿಯಾ. ಅಕ್ರಮ ಮದ್ಯ ಮಾರಾಟ. ಮತ್ತು ಗಾಂಜಾದ ಮಾಫಿಯಾ ನಡೆಸುವ ಕಳ್ಳಕಾಕರ ಎದೆಯಲ್ಲಿ ನಡುಕ ಹುಟ್ಟಿದೆ.
ಜನ ಸ್ನೇಹಿ ಹಾಗೂ ಖಡಕ್ ಪಿಐ ಎಸ್ ವಿ ಗಿರೀಶ್ ರವರು ಸಾಗರದಲ್ಲಿ ಕಾರ್ಯನಿರ್ವಹಿಸಿರುವ ಹಾಗೇಯೇ ಹೊಸನಗರದಲ್ಲೂ ಕಾರ್ಯ ನಿರ್ವಹಿಸಿ ಕಳ್ಳಕಾಕರಿಗೆ ಹಾಗೂ ಸಮಾಜಘಾತುಕ ಶಕ್ತಿಗಳಿಗೆ ಕಡಿವಾಣ ಹಾಕುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಹೊಸನಗರ ತಾಲೂಕಿನ ಜನತೆ…
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್