ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ರಿಪ್ಪನ್ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡು ರಿಪ್ಪನ್ಪೇಟೆಗೆ ಕೀರ್ತಿ ತರುತ್ತಿರುವ ಯುವ ಕ್ರೀಡಾಪಟುವಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂಜಿತ ಗೌಡ 19 ಬಾರಿ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಭಾರತ ದೇಶದ ಪರವಾಗಿ ಅಂತರ್ ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಭಾರತ ಹಾಗೂ ಕರ್ನಾಟಕದ ಹಾಕಿ ಕ್ರೀಡೆಯ ಪತಾಕೆಯನ್ನು ಹಾರಿಸಬೇಕೆಂಬ ಅಭಿಲಾಷೆ ಇದೆ ಎಂದರು.
ಈ ಸಂಧರ್ಭದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಬಿ ಲಕ್ಷ್ಮಣ್ ಗೌಡ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ ಯುವ ಕ್ರೀಡಾಪಟುವಿನ ಬೆಂಬಲಕ್ಕೆ ನಮ್ಮ ಸಮಾಜ ಎಂದಿಗೂ ಇರುತ್ತದೆ ಎಂದರು.
ಈ ಸಂಧರ್ಭದಲ್ಲಿ ಒಕಲಿಗರ ಸಂಘದ ಗೌರವಾಧ್ಯಕ್ಷರಾದ ಯೋಮಕೇಶಪ್ಪಗೌಡರು ಕಾರ್ಯದರ್ಶಿಗಳಾದ ಲೋಕಪ್ಪಗೌಡರು ಸಹ ಕಾರ್ಯದರ್ಶಿಯಾದ ಎಂಎಂ ಪರಮೇಶ್ ನಿರ್ದೇಶಕರಾದ ಹಾಲಪ್ಪ ಗೌಡರು, ನಾಗರಾಜ್ ಗೌಡ, ಪ್ರಕಾಶ್ ನಾಯಕ್, ಕೃಷ್ಣಮೂರ್ತಿ ಗೌಡರು ತಿಮ್ಮಯ್ಯಗೌಡರು , ಸಿದ್ಧಪ್ಪ ಗೌಡರು ಮುಖಂಡರಾದ ಸುಧಾಕರ , ಅಶೋಕ ವಿಷ್ಣುಮೂರ್ತಿ , ವಿಶ್ವಮಾನವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹರೀಶ್ ನಿರ್ದೇಶಕರಾದ ಷಣ್ಮುಖ, ಪ್ರಭಾಕರ್ ಇನ್ನೂ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್