ಹಣಗೆರೆಕಟ್ಟೆಯಲ್ಲಿ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ !!!! ದೂರು ದಾಖಲು
ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ. ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್…