Headlines

ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :

ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹತಾಯಿ : ಎಲ್ಲಿ ಗೊತ್ತಾ…???? ಈ ಸುದ್ದಿ ನೋಡಿ….

ಅವಳಿ ಮಕ್ಕಳು ಜನಿಸುವುದು ಸಾಮಾನ್ಯ, ಇನ್ನೂ ಕೆಲವು ಮಹಿಳೆಯರು ತ್ರಿವಳಿ ಮಕ್ಕಳಿಗೂ ಜನ್ಮ ನೀಡಿದ ಉದಾಹರಣೆಗಳಿವೆ. ಆದರೆ ಒಟ್ಟಿಗೆ ನಾಲ್ಕು ಮಕ್ಕಳು ಹುಟ್ಟಿರುವುದು ಸ್ವಲ್ಪ ವಿರಳ. ಶಿವಮೊಗ್ಗದ ಮಹಿಳೆಯೊಬ್ಬರು ಒಂದೇ ಬಾರಿಗೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಅಲ್ಮಾ ಬಾನು ಎಂಬುವವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ವಿಷಯವೇನೆಂದರೆ ಅಲ್ಮಾ ಬಾನು ಅವರಿಗೆ ಎರಡು ಗಂಡು, ಎರಡು ಹೆಣ್ಣು ಮಕ್ಕಳು ಜನಿಸಿವೆ. ಆರೀಫ್ ಮತ್ತು ಅಲ್ಮಾ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು:

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ  ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read More

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿ ಎ ವಿಭಾಗದಲ್ಲಿ ಎರಡು ರ‍್ಯಾಂಕ್ ಪಡೆದ ಕಾಲೇಜು

ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದಿದ್ದಾರೆ. ಬಿ.ಎ ವಿಭಾಗದಲ್ಲಿ ಕಾವ್ಯ ಸಿ 88.33% ಅಂಕ ಗಳಿಸುವುದರೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ಬಿ ಎ ವಿಭಾಗದಲ್ಲಿ ಸಿಂಧು ಜಿ 86.42% ಅಂಕ ಗಳಿಸಿ‌ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ುವೆಂಪು ವಿಶ್ವವಿದ್ಯಾಲಯದ ಎರಡು ರ‍್ಯಾಂಕ್…

Read More

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…

Read More