SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು ಸಾಲುಸಾಲಾಗಿ ಬಂದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ತಡವಾಯಿತು. ರಾಜ್ಯದ ಸುಮಾರು 234 ಮೌಲ್ಯಮಾಪನ ಕೇಂದ್ರಗಳಲ್ಲಿ 63,796 ಶಿಕ್ಷಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡಿದ್ದರು. ರಾಜ್ಯದ 3,446 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದರು.

ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವ ವಿದ್ಯಾರ್ಥಿಗಳಿಗೆ ಶೇ 10ರಷ್ಟು ಗ್ರೇಸ್​ ಮಾರ್ಕ್ಸ್​ ಕೊಡಲು ಸರ್ಕಾರ ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು, ಅಕಸ್ಮಾತ್ ಉಳಿದ ಮೂರು ವಿಷಯಗಳಲ್ಲಿ ಕಡಿಮೆ ಅಂಕ ಪಡೆದು, ಫೇಲ್ ಆಗುವ ಪರಿಸ್ಥಿತಿ ಅನುಭವಿಸುತ್ತಿದ್ದಾರೆ ಮಾತ್ರ ಕೃಪಾಂಕ ಸಿಗುತ್ತದೆ. ಜೂನ್ 4 ನೇ ವಾರದಲ್ಲಿ ಪೂರಕ ಪರೀಕ್ಷೆ (SSLC supplementary exams) ನಡೆಯಲಿದೆ.

ಫಲಿತಾಂಶ ನೋಡುವ ವೆಬ್‌ಸೈಟ್ ಇಲ್ಲಿವೆ 👇👇👇👇👇



ಹಂತ 1 – ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ಗೆ ಭೇಟಿ ನೀಡಿ: karresults.nic.in 2022 SSLC ಫಲಿತಾಂಶ.
ಹಂತ 2 – ಇದು 2022 ರ SSLC ವೆಬ್‌ಸೈಟ್‌ನಲ್ಲಿ Karresults nic ನ ಮುಖಪುಟವನ್ನು ತೆರೆಯುತ್ತದೆ.
ಹಂತ 3 – 10 ನೇ ಫಲಿತಾಂಶ ಕರ್ನಾಟಕ 2022 ವೆಬ್‌ಸೈಟ್‌ನಲ್ಲಿ, ಕರ್ನಾಟಕ SSLC ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 4 – ಇದು KSEEB SSLC ಫಲಿತಾಂಶ 2022 ಲಾಗಿನ್ ವಿಂಡೋಗೆ ಕಾರಣವಾಗುತ್ತದೆ.
ಹಂತ 5 – kseeb.kar.nic.in 2022 ಫಲಿತಾಂಶ ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 6 – SSLC ಫಲಿತಾಂಶ 2022 ಕರ್ನಾಟಕವು ಪರದೆಯ ಮೇಲೆ ಕಾಣಿಸುತ್ತದೆ.
ಹಂತ 7 – SSLC ಫಲಿತಾಂಶ ಪರಿಶೀಲನೆಯ ನಂತರ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ ಮತ್ತು ಭವಿಷ್ಯದ ಉಲ್ಲೇಖಗಳಿಗಾಗಿ ಅದನ್ನು ಸುರಕ್ಷಿತವಾಗಿರಿಸಿಕೊಳ್ಳಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

12 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

15 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

15 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 days ago