SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು ಸಾಲುಸಾಲಾಗಿ ಬಂದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ತಡವಾಯಿತು. ರಾಜ್ಯದ ಸುಮಾರು 234 ಮೌಲ್ಯಮಾಪನ ಕೇಂದ್ರಗಳಲ್ಲಿ 63,796 ಶಿಕ್ಷಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡಿದ್ದರು. ರಾಜ್ಯದ 3,446 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದರು.

ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವ ವಿದ್ಯಾರ್ಥಿಗಳಿಗೆ ಶೇ 10ರಷ್ಟು ಗ್ರೇಸ್​ ಮಾರ್ಕ್ಸ್​ ಕೊಡಲು ಸರ್ಕಾರ ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು, ಅಕಸ್ಮಾತ್ ಉಳಿದ ಮೂರು ವಿಷಯಗಳಲ್ಲಿ ಕಡಿಮೆ ಅಂಕ ಪಡೆದು, ಫೇಲ್ ಆಗುವ ಪರಿಸ್ಥಿತಿ ಅನುಭವಿಸುತ್ತಿದ್ದಾರೆ ಮಾತ್ರ ಕೃಪಾಂಕ ಸಿಗುತ್ತದೆ. ಜೂನ್ 4 ನೇ ವಾರದಲ್ಲಿ ಪೂರಕ ಪರೀಕ್ಷೆ (SSLC supplementary exams) ನಡೆಯಲಿದೆ.

ಫಲಿತಾಂಶ ನೋಡುವ ವೆಬ್‌ಸೈಟ್ ಇಲ್ಲಿವೆ 👇👇👇👇👇



ಹಂತ 1 – ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ಗೆ ಭೇಟಿ ನೀಡಿ: karresults.nic.in 2022 SSLC ಫಲಿತಾಂಶ.
ಹಂತ 2 – ಇದು 2022 ರ SSLC ವೆಬ್‌ಸೈಟ್‌ನಲ್ಲಿ Karresults nic ನ ಮುಖಪುಟವನ್ನು ತೆರೆಯುತ್ತದೆ.
ಹಂತ 3 – 10 ನೇ ಫಲಿತಾಂಶ ಕರ್ನಾಟಕ 2022 ವೆಬ್‌ಸೈಟ್‌ನಲ್ಲಿ, ಕರ್ನಾಟಕ SSLC ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 4 – ಇದು KSEEB SSLC ಫಲಿತಾಂಶ 2022 ಲಾಗಿನ್ ವಿಂಡೋಗೆ ಕಾರಣವಾಗುತ್ತದೆ.
ಹಂತ 5 – kseeb.kar.nic.in 2022 ಫಲಿತಾಂಶ ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 6 – SSLC ಫಲಿತಾಂಶ 2022 ಕರ್ನಾಟಕವು ಪರದೆಯ ಮೇಲೆ ಕಾಣಿಸುತ್ತದೆ.
ಹಂತ 7 – SSLC ಫಲಿತಾಂಶ ಪರಿಶೀಲನೆಯ ನಂತರ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ ಮತ್ತು ಭವಿಷ್ಯದ ಉಲ್ಲೇಖಗಳಿಗಾಗಿ ಅದನ್ನು ಸುರಕ್ಷಿತವಾಗಿರಿಸಿಕೊಳ್ಳಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

7 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

7 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

7 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

14 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

19 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

19 hours ago