ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತವಾಗಿದ್ದು, ಝೀರೋ ಟ್ರಾಫಿಕ್ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ.
ನ್ಯಾಯಾಧೀಶ ಸದಾನಂದ ಎಂ ಕಲಾಲ್ (61) ರವರಿಗೆ ಹೃದಯಾಘಾತವಾಗಿದೆ. ಸದ್ಯ ಶಿವಮೊಗ್ಗದಿಂದ ಆಂಬ್ಯುಲೆನ್ಸ್ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದ್ದು, ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗಿದೆ.
ನಂತರ ತುಮಕೂರು ನಗರದ ಮೂಲಕ ಬೆಂಗಳೂರಿಗೆ ಝೀರೋ ಟ್ರಾಫಿಕ್ನಲ್ಲಿ ರವಾನಿಸಲಾಗುತ್ತದೆ.