Headlines

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರೆ, ಮನೋಜ್ ಎಂಕಾಂನಲ್ಲಿ ಓದುತ್ತಿದ್ದರು.

ಪ್ರಕರಣ ಭದ್ರಾವತಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

Exit mobile version