Breaking
12 Jan 2026, Mon

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು.

ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವು ಸಹ ನೀಡುತ್ತಿದ್ದರು.


ಇವರ ನಿಧನಕ್ಕೆ ರಿಪ್ಪನಪೇಟೆ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *