ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುವ ಕೆಲಸ ಈ ಯೋಜನೆಯಿಂದಾಗಿದ್ದು ಕಾಂಗ್ರೆಸ್ ಪಕ್ಷದಿಂದ ಈ ಯೋಜನೆಯನ್ನು ತೀವ್ರವಾಗಿ ಖಂಡಿಸುತ್ತೇನೆಂದು ತಿಳಿಸಿದರು.


ಹಿಂದಿನ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಯುವ ಜನತೆಗೆ ಹೊಸ ಉದ್ಯೋಗ ಸೃಷ್ಟಿ ಮಾಡದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣಿ ಭೂತರಾಗಿದ್ದಾರೆ. ನಿರುದ್ಯೋಗ ಸಮಸ್ಯೆ ಜೊತೆಗೆ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ, ನೋಟು ಅಮಾನ್ಯಕರಣ, ಜಿ ಎಸ್ ಟಿ ಅನುಷ್ಠಾನದ ಮೂಲಕ ಮತ್ತಷ್ಟು ನಿರುದ್ಯೋಗ ಸಮಸ್ಯೆಯನ್ನು ತೀವ್ರಗೊಳಿಸಿದೆ. ಹಾಗೂ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಸೃಷ್ಟಿಸಿದ ಆಸ್ತಿಗಳಾದ, ರೈಲ್ವೆ ಬಿ ಎಸ್ ಎನ್ ಎಲ್, ವಿಮಾನಯಾನ, ಎಲ್ ಐ ಸಿ, ಬ್ಯಾಂಕ್ ಗಳನ್ನು ಮುಂತಾದ ಅನೇಕ ಆಸ್ತಿಗಳನ್ನು ಖಾಸಗಿ ಶ್ರೀಮಂತರಿಗೆ ಮಾರಾಟ ಮಾಡುತ್ತಿದ್ದು ಬಡವರು ಬಡವರಾಗಿಯೇ ಉಳಿದು ಬಂಡವಾಳ ಶಾಹಿಗಳು ಶ್ರೀಮಂತರಾಗಲು ಹೊರಟಿದ್ದಾರೆ ಎಂದರು.

ಅಗ್ನಿಪಥ್ ಯೋಜನೆಯಲ್ಲಿ ನಾಲ್ಕು ವರ್ಷವಾದ ಮೇಲೆ ಅವರನ್ನು ಬೀದಿಗೆ ಬಿಸಾಕುವ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ ಆ ರೀತಿ ಮಾಡಬಾರದು. ಈ ದೇಶವನ್ನು ಜಾತಿ ಮತ್ತು ಧರ್ಮ ಮತ್ತು ಹಣದ ಮೇಲೆ ಅಧಿಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ನೆಡೆಯುತ್ತಿದೆ ಮೋದಿಯವರ ಆಡಳಿತ ಅನೈತಿಕತೆಯಿಂದ ಕೊಡಿದೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಈ ಎಲ್ಲದರಲ್ಲೂ ಬೇರೆ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ತರುತ್ತಿದ್ದಾರೆ ಎಂದರೆ ಇದರ ಹಿಂದೆ ನರೇಂದ್ರ ಮೋದಿ ಇದ್ದಾರೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ತೀರ್ಥಹಳ್ಳಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರ್ ಮಂಜುನಾಥ್ , ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಾದ ಮುಡುಬ  ರಾಘವೇಂದ್ರ , ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ  ಅಮರ್ ನಾಥ್ ಶೆಟ್ಟಿ , ರಾಘವೇಂದ್ರ ,ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಹುಂಚದಕಟ್ಟೆ ಆದರ್ಶ್ , ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶಬನಂ, ಉಪಾಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ, ಆಮ್ರಪಾಲಿ ಸುರೇಶ್,  ವಿಲಿಯಮ್ ಮಾರ್ಟಿಸ್  ಪೂರ್ಣೇಶ್ ಕೆಳಕೆರೆ ಸೇರಿ ಹಲವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

4 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

4 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

14 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

22 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

23 hours ago