ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು.
ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.
ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು.
ಐದು ದಿನದ ನಂತರ ವಾಸಿಯಾಗದಿದ್ದರೆ ಲಿವರ್ ಕಸಿ ಮಾಡಬೇಕಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಇಂದು ವಿದ್ಯಾರ್ಥಿನಿಯನ್ನು ಜಿರೋ ಟ್ರಾಫಿಕ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.