ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು.
ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ ನಾಡಗೀತೆಯನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರು ಅಗೌರವ ತೋರಿದ್ದಾರೆ. ಆದರೆ ಅಂತಹ ಪಠ್ಯ ಪರಿಷ್ಕರಣೆಯನ್ನು ಸರ್ಕಾರ ಒಪ್ಪಿಕೊಂಡಿದ್ದಾರೆ. ಈಗಿನ ಪಠ್ಯವನ್ನು ಬಿಟ್ಟು ಹಳೆಯ ಪಠ್ಯ ಪುಸ್ತಕವನ್ನೇ ಮಕ್ಕಳಿಗೆ ಕೊಡಬೇಕು ಎಂದು ತಿಳಿಸಿದರು.
ಈ ಸರ್ಕಾರದವರು ಯಾವಾಗಲು ಶ್ರೀರಾಮ ಶ್ರೀರಾಮ ಎನ್ನುತ್ತಾರೆ. ಆದರೆ ರಾಮಾಯಣ ದರ್ಶನಂ ಬರೆದ ಕವಿಗಳ ಪದ್ಯಗಳನ್ನು ಈಗಿನ ಪಠ್ಯ ಪರಿಷ್ಕರಣ ಸಮಿತಿ ಅವಹೇಳನ ಮಾಡಿದೆ. ಆದರೂ ಸರ್ಕಾರ ಸುಮ್ಮನಿರುವುದು ಯಾಕೆ? ಎಂದು ಪ್ರಶ್ನಿಸಿದರು.
ರಾಷ್ಟ್ರಕವಿ ಕುವೆಂಪು ಅವರೊಬ್ಬರೇ ಅಲ್ಲದೆ ನಾರಾಯಣ ಗುರು, ಬಸವಣ್ಣ, ಡಾ. ಬಿ ಆರ್ ಅಂಬೇಡ್ಕರ್, ಶಂಕರಾಚಾರ್ಯರು ಸೇರಿ ಹಲವರಿಗೆ ಚಕ್ರತೀರ್ಥ ನೇತೃತ್ವದ ಸಮಿತಿ ಅವಮಾನ ಮಾಡಿದೆ. ಸಮಿತಿಯನ್ನು ಸರ್ಕಾರ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ. ಟಿ ಎಲ್ ಸುಂದರೇಶ್, ಸಚಿಂದ್ರ ಹೆಗ್ಡೆ, ಸಾಹಿತಿ ರಮೇಶ್ ಶೆಟ್ಟಿ, ರಾಮಚಂದ್ರ, ಹಾರೊಗೊಳಿಗೆ ಪದ್ಭಾನಾಭ್, ವೆಂಕಟೇಶ್ ಹೆಗ್ಡೆ, ಶಬನಮ್, ಸುಶೀಲ ಶೆಟ್ಟಿ, ಬಾಳೇಹಳ್ಳಿ ಪ್ರಭಾಕರ್,ಹಾಲಗದ್ದೆ ಉಮೇಶ್, ಶಿರುಪತಿ ಮಂಜುನಾಥ್ , ಕಂಡಿಲ್ ರಾಘವೇಂದ್ರ, ರೆಹಮತುಲ್ಲಾ ಅಸಾದಿ, ಕುರುವಳ್ಳಿ ನಾಗರಾಜ್ ಸೇರಿ ಹಲವರು ಉಪಸ್ಥಿತರಿದ್ದರು.
ಮಾಹಿತಿ: ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್