ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ ಹಿನ್ನಲೆಯಲ್ಲಿ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತಿದ್ದವರು ಬಂದು ಜಗಳ ಬಿಡಿಸಿದ್ದಾರೆ.ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳ ಮೇಲೆ ಐಪಿಸಿ 324,323,506 ಹಾಗೂ 308 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ‌.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ರಿಪ್ಪನ್ ಪೇಟೆಯ ಲೇಔಟ್ ಗಳ ಬಯಲು ಪ್ರದೇಶಗಳೇ ಕುಡುಕರ  ಸಾಮ್ರಾಜ್ಯ…!

ರಿಪ್ಪನ್‌ಪೇಟೆಯ ಮದ್ಯದ ಅಂಗಡಿಗಳಲ್ಲಿ ಬೇರೆ ಬೇರೆ ಊರುಗಳಿಂದ ಬಂದವರು ಹೆಂಡ ಪಡೆದುಕೊಂಡು ಪಟ್ಟಣದ ವಿವಿಧ ಭಾಗಗಳಲ್ಲಿ ನಿರ್ಮಾಣಗೊಂಡಿರುವ ಲೇಔಟ್ ಗಳ ಬಯಲು ಪ್ರದೇಶಗಳನ್ನು ಕುಡುಕರ ಸಾಮ್ರಾಜ್ಯವನ್ನಾಗಿ ಮಾಡಿಕೊಂಡಿದ್ದಾರೆ. ಅಲ್ಲೇ ಕುಡಿದು ಖಾಲಿ ಬಾಟಲಿಗಳನ್ನು  ಒಡೆದು, ರಣ ಕೇಕೆ ಹಾಕಿ ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಲಕ್ಷಾಂತರ ರೂ ಹಣ ಪಾವತಿಸಿ ಸೈಟ್ ಪಡೆದ ಮಾಲೀಕರುಗಳು ಇವರ ಅಬ್ಬರವನ್ನು ಬೆಚ್ಚುಗಣ್ಣಿನಿಂದ ನೋಡುತ್ತಾ ಹಿಡಿಶಾಪ ಹಾಕುತಿದ್ದಾರೆ.


ಲೇಔಟ್ ಗಳ ಅಕ್ಕಪಕ್ಕದಲ್ಲಿ  ವಾಸಿಸುತ್ತಿರುವ ನಿವಾಸಿಗಳು ಹಾಗೂ ಸುತ್ತಮುತ್ತಲಿನ ನಾಗರಿಕರು ಗಳು ಕುಡುಕರ ಹಾವಳಿಯಿಂದ ಬೆಚ್ಚಿಬೀಳುತ್ತಿದ್ದಾರೆ. ಸಾಗರ ರಸ್ತೆ, ಹೊಸನಗರ ರಸ್ತೆ, ತೀರ್ಥಹಳ್ಳಿ ರಸ್ತೆ ಹಾಗೂ ಶಿವಮೊಗ್ಗ ರಸ್ತೆಯಲ್ಲಿನ  ಲೇಔಟ್ ಗಳ  ಖಾಲಿ ನಿವೇಶನಗಳನ್ನು ಹಗಲು ಕುಡುಕರುಗಳು ಮತ್ತು ರಾತ್ರಿ ಕುಡುಕರುಗಳು ಬಾರ್ ಗಳನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ.


ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು  ಹಾಗೂ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೀಗೆ ಮುಂದುವರಿದರೆ ರಿಪ್ಪನ್ ಪೇಟೆ ಎಂಬ ಸುಸಂಸ್ಕೃತ ಪಟ್ಟಣವು ಹೊಸನಗರ ತಾಲೂಕಿನ ಕುಡುಕರ ರಾಜಧಾನಿಯಾಗಲಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

12 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

14 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

14 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

14 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 days ago