ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು.


ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.

ನಂತರ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲವರು ಬಂದು ಹೋಗಿದ್ದರು ಪಕ್ಷದ ಕಾರ್ಯಕರ್ತರು ಇಲ್ಲೆ ಇದ್ದಾರೆ ಅವರೆನ್ನೆಲ್ಲಾ ಸಂಘಟಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ.ತಾಲೂಕಿನ ಸ್ಥಳೀಯ ಸಮಸ್ಯೆಗಳು ಬೂತ್ ಮಟ್ಟದ ಸಮಸ್ಯೆಗಳಿಗೆ ಹೆಚ್ಚು ಗಮನ ಕೊಡುವ ಮುಖಾಂತರ ಜೆಡಿಎಸ್ ಪಕ್ಷ ಇನ್ನು ಮುಂಚೂಣಿಯಲ್ಲಿರುತ್ತದೆ. ಯುವ ನಾಯಕ ರಾಜಾರಾಂ ಚಿಕ್ಕದಾಗಿ ಕಂಡರೂ ಕೂಡ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಾರೆ. ಯುವಕರನ್ನು  ವಿಶ್ವಾಸಕ್ಕೆ ತೆಗೆದುಕೊಂಡು ತಂಡವನ್ನು  ಕಟ್ಟಿ ತಾಲೂಕಿನಾದ್ಯಂತ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬದಲಾವಣೆ ಕಾಣಬೇಕಿದೆ. ಆ ಬದಲಾವಣೆಗೆ ಮತದಾರರ ಪೂರ್ಣ ಸಹಕಾರವನ್ನು ಈ ಸಂದರ್ಭದಲ್ಲಿ  ಕೇಳಿದರು.


ನಂತರ ಯಡೂರು ರಾಜಾರಾಂ ಮಾತನಾಡಿ ನಮ್ಮ ಕಚೇರಿಯನ್ನು ಸಮಾಜಮುಖಿ ಕೆಲಸಗಳಿಗೆ ಮೀಸಲಿಟ್ಟು ಒಳ್ಳೊಳ್ಳೆ ಕೆಲಸಗಳನ್ನು ಮಾಡುತ್ತೇವೆ  ತೀರ್ಥಹಳ್ಳಿ ಕ್ಷೇತ್ರದಲ್ಲಿ ಎಲ್ಲರ ಸಹಕಾರದಿಂದ ಯುವ ತಂಡವನ್ನು ಕಟ್ಟಿಕೊಂಡು ಹೊಸ ಸವಾಲಿನೊಂದಿಗೆ ಅನೇಕ ಕನಸಗಳನ್ನು ಹೊತ್ತು ಕ್ಷೇತ್ರದಲ್ಲಿ  ಅಭಿವೃದ್ಧಿ ದೃಷ್ಟಿಯಿಂದ ಅನೇಕ ಯೋಜನೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದೇವೆ.  ಯುವಕರಿಗೆ ಹೆಚ್ಚು ಪ್ರಾತಿನಿಧ್ಯ ಕೊಡುವ ಉದ್ದೇಶದಿಂದ ಜೆಡಿಎಸ್ ಕಟ್ಟಿದ್ದೇವೆ.1983 ರಲ್ಲಿ ಇದೇ ಕಟ್ಟಡದಲ್ಲಿ ಚಂದ್ರೇಗೌಡರು ಗೆಲುವು ಸಾಧಿಸಿ ವಿಧಾನಸಭಾ ಪ್ರವೇಶಿಸಿದ್ದರು.ಹಾಗಾಗಿ ಇದೆ ಜಾಗ ಸೂಕ್ತ ಎಂದು ಜೆಡಿಎಸ್ ಕಛೇರಿಯನ್ನು ಆರಂಭಿಸಿದ್ದೇವೆ. ಈ ಜಾಗ ಜೆಡಿಎಸ್ ಪಕ್ಷಕ್ಕೆ ಉತ್ತಮ ವಾಸ್ತು ಇದ್ದ ಹಾಗೆ ಎಂದರು.

ಜೆಡಿಎಸ್ ರಾಜ್ಯ ಮುಖಂಡರಾದ ಅರ್ ಎ ಚಾಬುಸಾಬ್ ಮಾತನಾಡಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು ಅದನ್ನು ಉತ್ತಮ ರೀತಿಯಲ್ಲಿ ಸಂಘಟಿಸುವ ಮೂಲಕ 2023 ರ ಚುನಾವಣೆಯಲ್ಲಿ ಯಡೂರು ರಾಜಾರಾಮ್ ಗೆದ್ದು ವಿಧಾನಸಭೆ ಪ್ರವೇಶಿಸಬೇಕು ಎಂದರು. ರಾಜ್ಯಸಭೆ ಚುನಾವಣೆಯಲ್ಲಿ  ಜೆಡಿಎಸ್ ಪಕ್ಷಕ್ಕೆ ಮೋಸ ಮಾಡಿರುವ ಇಬ್ಬರು ಶಾಸಕರು ಮಾನ ಮರ್ಯಾದೆ ಇದ್ದಲ್ಲಿ ಕೂಡಲೇ ಜೆಡಿಎಸ್ ಪಕ್ಷಕ್ಕೆ  ರಾಜೀನಾಮೆ ನೀಡಬೇಕೆಂದು ಖಾರವಾಗಿ ಹೇಳಿದರು.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಜೆಡಿಎಸ್ ಅಧ್ಯಕ್ಷರಾದ ಕುಣಜೆ ಕಿರಣ್ ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾದ ಎನ್ ವರ್ತೇಶ್, ಮುಖಂಡರಾದ ರಾಘವೇಂದ್ರ ತಲಬಿ,ರಾಮಕೃಷ್ಣ, ಕಲ್ಲೂರು ಈರಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

9 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

21 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

21 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago