ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು.
ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ, ಡಾ.ರಾಜೇಂದ್ರ ಚನ್ನಿ ಸೇರಿದಂತೆ ರಾಜ್ಯದ ವಿವಿಧ ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಡಿನ ಎಲ್ಲಾ ಕ್ಷೇತ್ರಗಳ ಪ್ರಮುಖರನ್ನು ಪಾದಯಾತ್ರೆಗೆ ಆಹ್ವಾನಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಕವಿಶೈಲದಿಂದ ಆರಂಭಗೊಂಡು ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿ ತಲುಪಲಿದೆ. ಸಾಕಷ್ಟು ಸಮಯಾವಕಾಶ ಪಡೆದು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಬರಗೂರು ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಆದರೀಗ ಏಕಾಏಕಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಸಮಿತಿ ರದ್ದು ಮಾಡಿದರೆ ಸಾಲದು, ಪಠ್ಯಪುಸ್ತಕವನ್ನೇ ರದ್ದು ಮಾಡಬೇಕು ಎಂದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್