ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ.
ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.
ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದಿದ್ದ ಆರೋಪಿ:
ದೊಡ್ಡಪೇಟೆ ಠಾಣೆಯ ಕ್ರೈಮ್ ವಿಭಾಗದ ಸಿಬ್ಬಂದಿ ಗುರುನಾಯಕ್ ಮತ್ತು ರಮೇಶ್ ಅವರು ಶಾಹೀದ್ ಖುರೇಶಿ ಬಂಧಿಸಲು ತೆರಳಿದ್ದರು. ‘ಆರೋಪಿ ತನ್ನ ಸೊಂಟದಲ್ಲಿ ಚಾಕು ಇಟ್ಟುಕೊಂಡಿದ್ದ. ನಮ್ಮ ಸಿಬ್ಬಂದಿ ಆತನನ್ನು ಹಿಡಿಯಲು ಹೋದಾಗ ಚಾಕುವಿನಿಂದ ದಾಳಿ ಮಾಡಿದ್ದಾನೆ. ಸಿಬ್ಬಂದಿ ರಮೇಶ್ ಅವರ ಎಡಗೈಗೆ ಹಲ್ಲೆ ಮಾಡಿದ್ದಾನೆ. ಆಗ ಗುರುನಾಯಕ್ ಅವರು ಆರೋಪಿಯನ್ನು ಹಿಡಿದುಕೊಳ್ಳಲು ಮುಂದಾಗಿದ್ದಾರೆ. ಅವರ ಎದೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಘಟನೆ ಬಳಿಕ ಆರೋಪಿ ಶಾಹೀದ್ ಪರಾರಿಯಾಗಿದ್ದನು.
ಕಳೆದ ತಿಂಗಳು ಶಾಹಿದ್ ಖುರೇಶಿ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ರಾಬರಿ ಪ್ರಕರಣ ದಾಖಲಾಗಿತ್ತು. ಮೇ 5ರಂದು ಆರ್.ಎಂ.ಎಲ್ ನಗರದಲ್ಲಿ ಸದ್ದಾಂ ಹುಸೇನ್ ಎಂಬುವವರನ್ನು ಖುರೀಷಿ ಮತ್ತು ಆತನ ಇಬ್ಬರು ಸಹಚರರು ಅಡ್ಡಗಟ್ಟಿ ಬೆದರಿಕೆ ಒಡ್ಡಿದ್ದರು. 8 ಸಾವಿರ ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಶಾಹಿದ್ ಖುರೇಷಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್