ಮನುಕುಲದ ವಿರೋಧಿ ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು : ಹರತಾಳು ಹಾಲಪ್ಪ

ಸಾಗರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಸಾಗರ ನಗರ ಬಿಜೆಪಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಇಂತಹ ಅಮಾನವೀಯ ಘಟನೆ ಮಾನವ ಕುಲ ಒಪ್ಪುವಂತಹದಲ್ಲ,ಎಲ್ಲೇ ಆಗಲಿ ಇಂತಹ ವಾತವರಣ ನಿರ್ಮಾಣವಾದಲ್ಲಿ ಜಾತಿ,ಮತ,ಪಕ್ಷ ಭೇದ ಮರೆತು ಅಂತಹ ಮತಾಂಧರನ್ನು ಹೆಕ್ಕಿ ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು.ಸಮಾಜದಲ್ಲಿ  ಇಂತಹ ಮನುಕುಲದ ವಿರೋಧಿಗಳನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡುವುದರ ಮೂಲಕ ಅವರ ನೆಲೆಯನ್ನು ಧ್ವಂಸಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಹೇಡಿಗಳ ತರಹ ಅಂಗಡಿಗೆ ನುಗ್ಗಿ ಉದಯಪುರದ ಟೈಲರ್ ಕನ್ನಯ್ಯ ರವರನ್ನು ಕೊಲೆ ಮಾಡಿದ್ದಾರೆ.ಇಂತಹವರಿಗೆ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದರು.


ಸಾಗರ ನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಮಾತನಾಡಿ  ಕೆಲದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂದತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯಾಪಕವಾಗಿ ದಾಳಿ ಮಾಡಲಾಗುತ್ತಿದೆ. ಟಿ ವಿ ಚರ್ಚೆಯೊಂದರ ವೇಳೆ ಹಿಂದೂ ದೇವರ ನಿಂದನೆಗೆ ಪ್ರತಿಯಾಗಿ ಹೇಳಿಕೆ ನೀಡಿದ ಬಿ.ಜೆ.ಪಿ ನಾಯಕಿ ನೂಪರ್ ಶರ್ಮ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಮಾತ್ರಕ್ಕೆ ಮಹಮದ್ ರೀಯಾಜ್, ಮಹಮದ್ ಬೇರಿ ಎಂಬ ಇಸ್ಲಾಮಿಕ್ ಜಿಹಾದಿಗಳು ಸ್ಥಳೀಯ ಟೈಲರ್ 40 ವರ್ಷದ ಕನ್ನಯ್ಯ ಲಾಲ್ ಎಂಬುವವರನ್ನು ಹಾಡು ಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನುಷ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಇದರಿಂದ ಇಡೀ ಭಾರತೀಯ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಇದು ಅತ್ಯಂತ ಹೇಯ ಹಾಗೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಗರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಭಾಷಾಸಾಬ್ ಮಾತನಾಡಿ ಯಾವುದೇ ಧರ್ಮವೂ ಯಾರನ್ನು ಕೊಲ್ಲಲು ಹೇಳಿಕೊಟ್ಟಿಲ್ಲ,ಇಂತಹ ಮತಾಂಧರಿಗೆ “ಕಣ್ಣಿಗೆ ಕಣ್ಣು ಮುಯ್ಯಿಗೆ ಮುಯ್ಯಿ”
ಎಂಬ ಕಾನೂನು ತಂದು ಕೂಡಲೇ ಅವರನ್ನು ಗುಂಡಿಕ್ಕಿ ಕೊಲ್ಲಬೇಕು.ಜೀವಹಾನಿ ಮಾಡಲು ಯಾವುದೇ ಧರ್ಮಗ್ರಂಥ ಹೇಳಿ‌ಕೊಟ್ಟಿಲ್ಲ ಎಲ್ಲಾ ಧರ್ಮಗಳು ಸರ್ವೇಜನ ಸುಖಿನೋ ಭವತುಃ ಎಂಬುವದನ್ನೆ ಹೇಳಿಕೊಟ್ಟಿರುವುದು.ಇಂತಹ ಮತಾಂಧ ಕಿಡಿಗೇಡಿಗೇಡಿಗಳಿಂದ ಎಲ್ಲಾರಿಗೂ‌ ಕೆಟ್ಟ ಹೆಸರು ಕೂಡಲೇ ಸರ್ಕಾರ ನೂತನ ಕಾನೂನು ಜಾರಿ ಮಾಡುವ ಮೂಲಕ ಅವರನ್ನು ತತ್ತಕ್ಷಣ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಮಧುರ ಶಿವಾನಂದ್ ,ವಿ.ಮಹೇಶ್,ಅರವಿಂದ್ ರಾಯ್ಕರ್.ತುಕಾರಾಂ.ಅರುಣ್ ಕುಗ್ವೆ.ವಿನೋದ್ ರಾಜ್.ಕೆ.ಆರ್.ಎಸ್.ಎಂ, ಶಂಕರ್ ಆಳ್ವೆಕೊಡಿ.ಚೇತನ್ ರಾಜ್ ಕಣ್ಣೂರು.ಸತೀಶ್ ಮೋಗವೀರ.ತುಕಾರಾಂ. ಶ್ರೀನಿವಾಸ್ ಮೇಸ್ತ್ರಿ.ಮೈತ್ರಿ ಪಾಟೀಲ್.ಸಂತೋಷ್ ಶೆಟ್.ರಾಜೇಂದ್ರ ಪೈ.ಪುರುಷೋತ್ತಮ್.ಸವಿತಾ ವಾಸು. ಪರಶುರಾಮ್.ರಾಧಿಕ ಪೈ ಮೊದಲಾದವರು ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

4 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

6 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

18 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

21 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

21 hours ago