ರಿಪ್ಪನ್‌ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು‌ ಮುಂದಾದ MBBS ವೈದ್ಯ

ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು.
ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್  ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ ಪಟ್ಟಣದಲ್ಲಿ ಹುಟ್ಟಿ ಬೆಳೆದ ನಾನು ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್ ಪೇಟೆಯ ಶ್ರೀ ಬಸವೇಶ್ವರ ಕಾನ್ವೆಂಟ್ ನಲ್ಲಿ ಪಡೆದು  ವೈದ್ಯಕೀಯ ಪದವಿಯನ್ನು ಮಂಡ್ಯದ ಮೆಡಿಕಲ್ ಕಾಲೇಜಿನಲ್ಲಿ ಪಡೆದಿದ್ದೇನೆ.
ನನಗೆ ವಿದೇಶಗಳಲ್ಲಿ ಹಾಗೂ ನಗರ ಭಾಗಗಳಲ್ಲಿ ವೈದ್ಯಕೀಯ ಸೇವೆಯನ್ನು ಸಲ್ಲಿಸಲು ದೊಡ್ಡ ದೊಡ್ಡ ನರ್ಸಿಂಗ್ ಹೋಂ ಗಳ ಮುಖ್ಯಸ್ಥರು ಲಕ್ಷಾಂತರ ಸಂಬಳದ ಅವಕಾಶವನ್ನು ನೀಡುತ್ತೇನೆ ಎಂದರು ಸಹ ನನಗೆ ಬಾಲ್ಯದಿಂದಲೇ ನನ್ನೂರು ರಿಪ್ಪನ್ ಪೇಟೆ ಜನತೆಯ ಸೇವೆ ಮಾಡಬೇಕು ಎನ್ನುವ ಆಸೆ ಇತ್ತು ಹಾಗೆಯೇ ಗ್ರಾಮೀಣ ಪ್ರದೇಶದ ಬಡ ಜನತೆಗೆ ಆರೋಗ್ಯ ಸೇವೆಯನ್ನು ನೀಡಬೇಕೆಂಬುವುದು ನನ್ನ ಅಜ್ಜ ಕೃಷ್ಣಯ್ಯ ಶಾಸ್ತ್ರಿರವರ ಅಭಿಲಾಷೆಯು ಕೂಡ ಆಗಿತ್ತು ಎಂದರು.
ವೈದ್ಯಕೀಯ ಪದವಿ ಮುಗಿಸಿದ ನಂತರ ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವೃತ್ತಿಯನ್ನು ಮಾಡಿದ್ದು. ನಂತರ ಸರ್ಕಾರಿ ವೃತ್ತಿಗೆ ರಾಜೀನಾಮೆ ನೀಡಿ ನನ್ನ ಬಾಲ್ಯದ ಅಭಿಲಾಷೆಯಂತೆ ತಂದೆಯವರ ಮನೋ ಇಚ್ಛೆಯಂತೆ ಗ್ರಾಮೀಣ ಭಾಗದ ನಾಗರಿಕರಿಗೆ ಹಾಗೂ ಬಡವರಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ನೀಡಲು ರಿಪ್ಪನ್ ಪೇಟೆ ಪಟ್ಟಣದಲ್ಲಿ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್  ಪ್ರಾರಂಭಿಸಿದ್ದೇನೆ ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಡಾ. ಕಿರಣ್ ಶಾಸ್ತ್ರಿಯವರ ತಂದೆ  ಜಿ.ಕೆ ಅನಂತ ಶಾಸ್ತ್ರಿಯವರು ಮಾತನಾಡಿ ರಿಪ್ಪನ್ ಪೇಟೆ ಪಟ್ಟಣದಲ್ಲಿ ವೈದ್ಯಕೀಯ ಸೇವೆಯನ್ನು ಸಲ್ಲಿಸುತ್ತಿರುವ ವೈದ್ಯರುಗಳಲ್ಲಿ  ಎಂಬಿಬಿಎಸ್ ಪದವಿಯನ್ನು ಪಡೆದ ವೈದ್ಯರುಗಳು ಯಾರು ಇರಲಿಲ್ಲ. ನನ್ನ ಮಗ ಕಿರಣ್ ಶಾಸ್ತ್ರಿ ವೈದ್ಯಕೀಯ ಪದವಿಯನ್ನು ಪಡೆದು  ದೊಡ್ಡ ದೊಡ್ಡ ನಗರಗಳಲ್ಲಿ ಸೇವೆ ಮಾಡುವ ಅವಕಾಶಗಳು ಇದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಬಡಜನರ ಸೇವೆಗಾಗಿ ಮುಂದಾಗಿರುವುದು ನನಗೆ ಸಂತಸ ಮತ್ತು ಹೆಮ್ಮೆ ತಂದಿದೆ.  ಮುಂದಿನ ದಿನಗಳಲ್ಲಿ ಇವರ ಸೇವೆ ಪ್ರತಿಯೊಬ್ಬರಿಗೆ  ಸಿಗುವಂತಾಗಲಿ ಎಂದರು.
ಡಾ.ಕಿರಣ್ ಶಾಸ್ತ್ರೀಯವರ ಸಂದರ್ಶನದ ವೀಡಿಯೋ ಇಲ್ಲಿ ವೀಕ್ಷಿಸಿ👇

please subscribe our youtube channel “POSTMANNEWSKANNADA”—-
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

7 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

9 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

21 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

21 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago