ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಮೃತ ವ್ಯಕ್ತಿ ಹಾಗೂ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿ ತಂದೆ ಮಗ ಎಂದು ಹೇಳಲಾಗುತ್ತಿದೆ. ಎದುರುಗಡೆ ಬೈಕ್ ನಲ್ಲಿ ಇದ್ದವರು ಆಚಾಪುರ ನಿವಾಸಿ ರಾಜು ಎಂದು ತಿಳಿದುಬಂದಿದ್ದು.ರಾಜು ರವರಿಗೆ ಕಾಲು ಮುರಿತವಾಗಿದೆ.
ಮೃತಪಟ್ಟ ವ್ಯಕ್ತಿಯ ಶವವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ.
ಮೃತ ವ್ಯಕ್ತಿ ಹಾಗೂ ಗಂಬೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಹೊನ್ನೆಬೈಲ್ ಗ್ರಾಮದವರೆಂದು ಹೇಳಲಾಗುತಿದ್ದು.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ👇