ರಿಪ್ಪನ್‌ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು.


ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ  ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಶೌಚಗೃಹಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಹಾಗೂ ಶುಚಿತ್ವದ ನಿರ್ವಹಣೆಗಾಗಿ ಸಿಬ್ಬಂದಿಯನ್ನು ನೇಮಿಸಿದೆ. ಸಾರ್ವಜನಿಕರು ಶುಚಿತ್ವವನ್ನು ಕಾಪಾಡಿಕೊಂಡು ಬಳಕೆ ಮಾಡುವಂತೆ ಮನವಿಮಾಡಿದರು.

ಗ್ರಾಪಂ. ಸದಸ್ಯ ಆಸೀಫ್ ಭಾಷಾಸಾಬ್ ಮಾತನಾಡಿ ರಿಪ್ಪನ್‌ಪೇಟೆಯಲ್ಲಿ ಕೆಲ ಹೋರಾಟಗಾರರು ಎಲ್ಲಾ ಅಭಿವೃದ್ಧಿಯನ್ನು ನಾವೇ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ರಿಪ್ಪನ್‌ಪೇಟೆಗೆ ಸ್ವಾತಂತ್ಯ ತಂದವರು ನಾವೇ ಎಂದು ಹೇಳುತ್ತಿದ್ದಾರೆ. ಇದನ್ನು ನಾವು ಸಹಿತ ಒಪ್ಪಿಕೊಂಡಿದ್ದೆವು. ಆದರೆ ಶೌಚಾಲಯ ನಿರ್ಮಿಸುವ ಸಂದರ್ಭದಲ್ಲಿ ಕೆಲ ಹೊರಾಟಗಾರರು ದುಡ್ಡಿದ್ದವರ ಪರ ನಿಂತು ಶೌಚಾಲಯ ನಿರ್ಮಾಣಕ್ಕೆ ತೊಂದರೆ ಮಾಡಿದ್ದರು. ಇದರಿಂದ ಅವರ ನಿಜಬಣ್ಣ ಸಾರ್ವಜನಿಕವಾಗಿ ಬಯಲಾಗಿದೆ. ಇಂತಹ ಹೋರಾಟಗಾರರ ವಿರೋಧದ ನಡುವೆಯು ರಾತ್ರಿ ಹಗಲೆನ್ನದೆ ಶ್ರಮ ವಹಿಸಿದ್ದೇವೆ. ನಿಂದನೆಗಳು, ಗಲಾಟೆ, ಕಾನೂನು ಹೋರಾಟಗಳನ್ನು ಎದುರಿಸಿ ಶೌಚಾಲಯ ಅನುಷ್ಠಾನಗೊಳಿಸಿದ್ದೇವೆ. ಇನ್ನೂ ಕೆಲವು ಅಭಿವೃದ್ಧಿ ಕಾರ್ಯಗಳು ನಮ್ಮ ಯೋಜನೆಯಲ್ಲಿದ್ದು, ಒಳ್ಳೆಯ ಕಾರ್ಯಗಳಿಗೆ ಅನಾವಶ್ಯಕ ವಿರೋಧ ವ್ಯಕ್ತಪಡಿಸದೆ ಅಭಿವೃದ್ಧಿಯ ಜೊತೆಗೆ ಕೈಜೋಡಿಸಿ ಎಂದು ಕೆಲ ಹೋರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಪಂ ಸದಸ್ಯ ಸುಧೀಂದ್ರ ಪೂಜಾರಿ ಮಾತನಾಡಿ ಕೆಲವರು ಅನಗತ್ಯವಾಗಿ ನಮ್ಮ ಯೋಜನೆಯನ್ನು ಹಾಳುಗೆಡವಲು ಪ್ರಯತ್ನ ಪಟ್ಟರು. ಒಳ್ಳೆಯ ಮನಸ್ಸಿಲ್ಲದವರಿಂದ ಕುಕೃತ್ಯಗಳು ನಡೆಸಿ, ನಿರ್ಮಾಣಕ್ಕೆ ತೆಡೆಯೊಡ್ಡಿದ್ದರು. ಅಭಿವೃದ್ಧಿ ಕೆಲಸಕ್ಕೆ ಗೊಂದಲ ಸೃಷ್ಠಿಸಿ ಖುಷಿಪಡುವ ವಿಘ್ನಸಂತೋಷಿಗಳೇ ಹೆಚ್ಚಾಗಿದ್ದರು. ಆದರೂ ಎಲ್ಲಾ ಸದಸ್ಯರ ಒಮ್ಮತದ ಗಟ್ಟಿ ಪ್ರದರ್ಶನದಿಂದ ಎಲ್ಲಾ ಸವಾಲುಗಳನ್ನು ಎದುರಿಸಿ ಶೌಚಾಲಯ ನಿರ್ಮಿಸಿದ್ದೇವೆ. ಇನ್ನಾದರೂ ಹೊರಾಟಗಾರರೆನಿಸಿಕೊಂಡವರು ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಕರಿಸಿದ ಕುಕ್ಕಳಲೆ ಈಶ್ವರಪ್ಪ, ಅಮೀರ್ ಹಂಜ ಹಾಗೂ ನಾಗರಾಜ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಗ್ರಾ.ಪಂ.ಸದಸ್ಯರುಗಳಾದ ಡಿ.ಈ. ಮಧೂಸೂದನ, ಗಣಪತಿ, ಜಿ.ಡಿ. ಮಲ್ಲಿಕಾರ್ಜುನ, ನಿರೂಪ್ ಕುಮಾರ್, ಪ್ರಕಾಶ್ ಪಾಲೇಕರ್, ಧನಲಕ್ಷಿ, ವೇದಾವತಿ, ನಿರೂಪಮ, ದೀಪಾ, ಸಾರಾಭಿ, ವನಮಾಲ, ಆಶ್ವಿನಿ, ವಿನೋದ, ಪಿಡಿಓ ಚಂದ್ರಶೇಖರ್, ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಇನ್ನಿತರರಿದ್ದರು.



ಕಾರ್ಯಕ್ರಮದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

12 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

14 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

14 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

14 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 days ago