ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ.


ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ ತಲೆಗೆ  ತೀವ್ರತರವಾದ ಪೆಟ್ಟಾಗಿದ್ದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲು ಸೂಚಿಸಿದರು.


ಆದರೆ ಕಳೆದ ಮೂರು ತಿಂಗಳುಗಳಿಂದ ಈ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ ಎರಡು ಗಂಟೆಗೂ ಹೆಚ್ಚುಕಾಲ ತೀವ್ರ ಗಾಯಗೊಂಡಿದ್ದ ವ್ಯಕ್ತಿಯ ನರಳಾಟ ಹೃದಯ ವಿದ್ರಾವಕವಾಗಿತ್ತು.

ಒಂದೆಡೆ ತನ್ನ ತಂದೆ ಮೃತಪಟ್ಟು ಪಕ್ಕದ ಶವಗಾರದಲ್ಲಿ ಮಲಗಿದ್ದರೆ,ಇನ್ನೊಂದೆಡೆ ಮಗನು ಆಂಬುಲೆನ್ಸ್ ಇಲ್ಲದೇ ಜೀವ ಕೈಯಲ್ಲಿ ಹಿಡಿದು ನರಳಾಡುತಿದ್ದ ದೃಶ್ಯ ಮನ ಕಲಕುವಂತಿತ್ತು.

ಇದೇ ಸಂಧರ್ಭದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸುವ ಸಲುವಾಗಿ 108 ಅಂಬುಲೆನ್ಸ್ ಸೇವೆಗಾಗಿ ಜನಜಾಗೃತಿ ವೇದಿಕೆಯ ಅಧ್ಯಕ್ಷ  ಟಿ.ಆರ್ ಕೃಷ್ಣಪ್ಪ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಹತ್ತಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿದರು ಸಹ ಯಾರು ಸ್ಪಂದಿಸಲಿಲ್ಲ.

ಘಟನೆ ನಡೆದ ಎರಡು ಗಂಟೆಗೂ ಹೆಚ್ಚಿನ ಸಮಯದ ನಂತರ 108 ಅಂಬುಲೆನ್ಸ್  ಸೇವೆ ದೊರೆಯಿತು.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು  ರಿಪ್ಪನ್ ಪೇಟೆ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಸೇವೆಯನ್ನು ಒದಗಿಸಲು ಮುಂದಾಗಬೇಕೆಂದು ಜಿಪಂ ಮಾಜಿ ಸದಸ್ಯರಾದ ಬಂಡಿ ರಾಮಚಂದ್ರ,ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಘಟನೆಯ ಹಿನ್ನಲೆ :

ಗವಟೂರು ಶಾಲೆಯ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಬೈಕುಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಹೊಂಬುಜ ಸಮೀಪದ ಹೊನ್ನೇ ಬೈಲು ಗ್ರಾಮದ ಕಿಳೇರಿ ನಿವಾಸಿ ಗಣೇಶ್ ಅಲಿಯಾಸ್ ಗುಂಡಣ್ಣ(65  ) ಮೃತರಾಗಿದ್ದಾರೆ. ಜೊತೆಗಿದ್ದ ಇವರ ಮಗ ಮಹೇಂದ್ರ (  26) ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಶಾಲಾ ನೌಕರ ರಾಜು ಆಚಾಪುರ ಎಂಬಾತನಿಗೆ ತೀವ್ರತರವಾದ ಗಾಯಗಳಾಗಿದ್ದು ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತ ಪ್ರಕರಣ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನಕಲಕುವ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago