ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು.

ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು .

ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ  ಸಾಮರಸ್ಯವನ್ನು  ಹಾಳುಮಾಡಲು ನಿಂತಂತಿದೆ .ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಹುಚ್ಚಾಟ ಮಾಡುವಂತವರನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮ ಸರಿಯಾದುದಲ್ಲ ಎಂದ ಅವರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅನುಭವಿ ವಿದ್ವಾಂಸ ಜ್ಞಾನಪೀಠ ಪ್ರಶಸ್ತಿಗೆ ಅರ್ಹರಿರುವ ಹಿರಿಯ ಸಾಹಿತಿ ಲೇಖಕ ಬರಗೂರು ರಾಮಚಂದ್ರಪ್ಪನವರನ್ನು ಮುಂದುವರಿಸುವಂತೆ ಒತ್ತಾಯಿಸಿದರು.

ಪುನೀತ್ ರಾಜಕುಮಾರ್ ಹೆಸರು ಸೇರ್ಪಡೆಗೊಳ್ಳಲಿ :

ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ಪಠ್ಯಪುಸ್ತಕದಲ್ಲಿ ಇತ್ತೀಚೆಗೆ ಅಗಲಿದ ಕಿರಿಯ ವಯಸ್ಸಿನ ಹಿರಿಯ ವ್ಯಕ್ತಿತ್ವದ ಯುಗಪುರುಷ ಪುನೀತ್ ರಾಜ್‍ಕುಮಾರ್ ಹೆಸರು ಸೇರ್ಪಡೆ ಮಾಡಿ ಅವರ ಆದರ್ಶ ತತ್ವಗಳು ಮುಂದಿನ ಯುವಪೀಳಿಗಗೆ ಮಾರ್ಗದರ್ಶನವಾಗಲಿ ಎಂದರು.

ಪತ್ರೀಕಾ ಗೋಷ್ಠಿಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

12 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

14 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

14 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

14 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 days ago