Headlines

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು.


ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕನಸನ್ನು ನನಸು ಮಾಡಿಕೊಂಡಿದ್ದಾರೆ. 

ಇವರು ಮೂಲತಃ ತೀರ್ಥಹಳ್ಳಿಯ ಕುರುವಳ್ಳಿಯ ನಿವಾಸಿಗಿದ್ದು ತಂದೆ ಸುರೇಶ ತಾಯಿ ನಾಗರತ್ನ ಇವರ ಪುತ್ರಿಯಾಗಿರುತ್ತಾರೆ.  ರಾಯಚೂರಿನಲ್ಲಿ ವೈದ್ಯೆಯಾಗಿ ವ್ಯಾಸಂಗ ಮಾಡಿದ   ಇವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಗಿದೆ. ವಿಷಯ ತಿಳಿದ ಗೃಹಸಚಿವ ಆರಗ ಜ್ಞಾನೇಂದ್ರ ರವರು ಇವರಿಗೆ ಅಭಿನಂದನೆ ತಿಳಿಸಿದ್ದಾರೆ.




ವರದಿ : ಅಕ್ಷಯ್ ಕುಮಾರ್

Leave a Reply

Your email address will not be published. Required fields are marked *