ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು.
ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.
ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು.
ಜೂನ್ 4ರಂದು ನಡೆದಿದ್ದ ಘಟನೆ :
ಹಸು ಮೈ ತೊಳೆಯಲು ಹೋದ ಬಾಲಕ ಕಾಲು ಜಾರಿ ಬಿದ್ದು ನೀರು ಪಾಲಾದ ಮನಕಲಕುವ ಘಟನೆ ಸಾಗರ ತಾಲೂಕು ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿತ್ತು.
ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ಇವರು ಬೇರೆ ಊರಿಗೆ ತೆರಳಿದ್ದರು ಆ ಸಂದರ್ಭದಲ್ಲಿ ಇವರ ಮಗ ಹಸುಗಳನ್ನು ಮೈ ತೊಳಸಿಕೊಂಡು ಬರಲು ಗ್ರಾಮದ ಬೆಲೆಸಿನಕೆರೆ ಕೆರೆಗೆ ತೆರಳಿದ್ದ. ಮೈ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದನು.
ಗ್ರಾಮಸ್ಥರು ಅಗ್ನಿಶಾಮಕ ದಳದವರಿಗೆ ಮಾಹಿತಿಯನ್ನು ತಿಳಿಸಿ ಅಗ್ನಿಶಾಮಕ ದಳದ ಸಹಾಯದಿಂದ ಮೃತ ಬಾಲಕನ ಶವವನ್ನು ಕೆರೆಯಿಂದ ಮೇಲಕ್ಕೆತ್ತಲಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್