January 11, 2026

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ.
ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version