ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು.

ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.


ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ,ಹಾಗೆಯೇ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲ ವರ್ಗಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದರು.

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ವತಿಯಿಂದ ನಿವೇಶನಕ್ಕೆ ಮನವಿ ಮಾಡಿರುವ ವಿಚಾರವನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


ನಂತರ ಮಾತನಾಡಿದ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಅಧ್ಯಕ್ಷರಾದ ಆನಂದ ಮೆಣಸೆ ಶಾಸಕರಾದ ಶಾಸಕರಾದ ಹೆಚ್.ಹಾಲಪ್ಪ ನವರು, ಸಂಸದರಾದ ಬಿ ವೈ ರಾಘವೇಂದ್ರ ಹಾಗೂ ಯಡಿಯೂರಪ್ಪ ನವರ ಮೂಲಕ ನಮ್ಮ ತಾಲ್ಲೂಕಿನಲ್ಲಿ  ಸಮಾಜದ ಅಭಿವೃದ್ಧಿಗೆ ಅನೇಕ ಅನುದಾನಗಳನ್ನು ನೀಡಿದ್ದು ರಿಪ್ಪನ್ ಪೇಟೆಯ ಶಿವ ಮಂದಿರ ನಿರ್ಮಾಣಕ್ಕೆ 3ಕೋಟಿ ರೂ, ಮೂಲೆಗದ್ದೆ ಮಠಕ್ಕೆ 1ಕೋಟಿ ರೂ ಹೀಗೆ ಹಲವಾರು ಸಮಾಜದ ಅಭಿವದ್ಧಿಗೆ ಅನುದಾನ ನೀಡುವುದರ ಮೂಲಕ ಸಹಕಾರಿಯಾಗಿದ್ದಾರೆ.ಅವರಿಗೆ ನಮ್ಮ ಸಮಾಜದ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಹಾಗೆಯೇ ಹೊಸನಗರದಲ್ಲಿ ಸಮಾಜದ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ನಿವೇಶನ ಮಂಜೂರು ಮಾಡಿಸಿಕೊಡುವಂತೆ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ, ವಾಟಗೋಡು ಸುರೇಶ್ ,ಎನ್.ವರ್ತೇಶ್,ಯೋಗೇಂದ್ರಪ್ಪ ಗೌಡ್ರು,ಈಶ್ವರಪ್ಪ ಗೌಡ್ರು,ಕೀರ್ತಿರಾಜ್ ಗೌಡ್ರು,ಮಳಲಿಕೊಪ್ಪ ವೀರೇಶ್ ಗೌಡ್ರು,ಗ್ರಾ ಪಂ ಸದಸ್ಯರಾದ ಮಲ್ಲಿಕಾರ್ಜುನ್,ಸಚಿನ್,ಪ್ರವೀಣ್,ಪರಿಷತ್ ಪದಾಧಿಕಾರಿಗಳು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

12 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

14 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

14 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

14 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 days ago