Headlines

ಭೀಕರ ಅಪಘಾತ : ಚಾಲಕನ ಕಾಲು ಮುರಿತ

ಶಿವಮೊಗ್ಗ : ಬೇಡರ ಹೊಸಳ್ಳಿಯ ಕೆರೆಯ ಬಳಿ ಓಮ್ನಿ ಮತ್ತು ಐ 20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದೆ. ಜೊತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಓಮ್ನಿ ಕಾರು ನುಜ್ಜುಗುಜ್ಜಾಗಿದೆ. ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ರಕ್ತಗಾಯಗಳಾಗಿದೆ….

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ :

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ….

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ಐಟಿ ಕಚೇರಿಗೆ ಮುತ್ತಿಗೆ ಯತ್ನ: ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು​​

ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…

Read More

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.  ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…

Read More

ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಭದ್ರಾವತಿ : ಇಲ್ಲಿನ ವಿಐಎಸ್‌ಎಲ್‌ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…

Read More

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…

Read More