Headlines

ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.

ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ  ಪಿಯುಸಿ  ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ  ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …

Read More

ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…

Read More

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read More

ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.  ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :  ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…

Read More

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :

 ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಹೊಸನಗರ ತಾಲೂಕಿನ ಕುಗ್ರಾಮ ನಿಟ್ಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಯಲ್ಲಿ ಶೇಕಡ 91.93 ಫಲಿತಾಂಶ.

ನಿಟ್ಟೂರು: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊಸನಗರ ತಾಲೂಕಿನ ಕುಗ್ರಾಮದಲ್ಲಿರುವ  ಸಂಪೆಕಟ್ಟೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021 -22 ನೇ ಸಾಲಿನಲ್ಲಿ ನಡೆದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಸ್ನೇಹಮಯಿ ಮತ್ತು ಕರ್ತವ್ಯ ನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ  ನಿಟ್ಟೂರು ಸರಕಾರಿ…

Read More