Headlines

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ ಶವ ಪತ್ತೆ :

ರಾಜಾಕಾಲುವೆಯಲ್ಲಿ ಕೊಚ್ಚಿಹೋದ ಸಾಗರ ಸಮೀಪದ ಅದರಂತೆ ಗ್ರಾಮದ ಯುವಕ ಮಿಥಿನ್(26) ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಯುವಕನ ಶವ ರಾಜಾಕಾಲುವೆಗೆ ಬಿದ್ದ ಸ್ಥಳದಿಂದ 1.5 ಕಿಮೀ ದೂರದಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸ್ವಗ್ರಾಮವಾದ ಸಾಗರದ ಅದರಂತೆ ಗ್ರಾಮಕ್ಕೆ ಕರೆತರಲಾಗುತ್ತಿದೆ. ರಾಜಾಕಾಲುವೆಯಲ್ಲಿ ಸಾಗರದ ಯುವಕ ಮಿಥಿನ್ ಕೊಚ್ಚಿಹೋದ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಪ್ರತ್ಯಕ್ಷದರ್ಶಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದು…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.  ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ …

Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read More

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read More

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More