Headlines

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಪದವಿ ತರಗತಿಯಲ್ಲಿ ರ‍್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಸನ್ಮಾನ :

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಗ್ರಾಮದ ಇಬ್ಬರು ವಿದ್ಯಾರ್ಥಿನಿಯರು ಈ ಬಾರಿಯ ಕುವೆಂಪು ವಿಶ್ವವಿದ್ಯಾನಿಲಯ ನಡೆಸಿದ  ಪದವಿ ಪರೀಕ್ಷೆಯಲ್ಲಿ ಅಂತಿಮ ವರ್ಷದ ಕಲಾ ವಿಭಾಗದಲ್ಲಿ ರ‍್ಯಾಂಕ್ ಗಳಿಸಿ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ರಿಪ್ಪನ್‌ಪೇಟೆ ಪದವಿ‌ ಕಾಲೇಜಿಗೆ ಎರಡು ರ‍್ಯಾಂಕ್ ತಂದುಕೊಟ್ಟಂತಹ ಕಾವ್ಯ ಸಿ ಹಾಗೂ ಸಿಂಧು ಜೆ ರವರಿಗೆ ಕೂರಂಬಳ್ಳಿ ಗ್ರಾಮದ ಕಾವ್ಯ ಸಿ ರವರ ಸ್ವಗೃಹದಲ್ಲಿ ಇಬ್ಬರು…

Read More

ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು ಮಾಲು ಸಮೇತ ಸೆರೆ :

ಅರಣ್ಯ ಸಂಚಾರಿ ದಳದ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಕಾನೂನು ಬಾಹಿರವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟದಲ್ಲಿ ತೊಡಗಿದ್ದಂತಹ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ಜಿಂಕೆ ಕೊಂಬುಗಳ ಸಾಗಾಟದಲ್ಲಿ ತೊಡಗಿದ್ದ ಸಿರಿಗೆರೆ ನಿವಾಸಿ ಇಸ್ಮಾಯಿಲ್,ಹಾರನಹಳ್ಳಿ ನಿವಾಸಿ ನಯಾಜುಲ್ಲಾ ರನ್ನು ಬಂಧಿಸಿ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಚಂದ್ರಕಾಂತ್ ಐಪಿಎಸ್ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್…

Read More

ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು. ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.   ನಂತರ…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More